ಕುಂದಾಪುರ ಮಿರರ್ ಸುದ್ದಿ…
ಹೆಮ್ಮಾಡಿ:ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ(Freshrs day) ಹಾಗೂ ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿ.ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ಕುಂದಾಪುರದ ಮೊಗವೀರ ಭವನದಲ್ಲಿ ಆಯೋಜಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರರವರು ವಹಿಸಿದ್ದರು.
ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರದ ಆದರ್ಶ ಆಸ್ಪತ್ರೆಯ ಎಮ್.ಡಿ. ಡಾ|ಆದರ್ಶ ಹೆಬ್ಬಾರ್ ರವರು ಮಾತನಾಡಿ ಶಿಕ್ಷಣ, ಕ್ರೀಡೆ, ಕಲೆ, ಸಾಹಿತ್ಯದ ಸಂಗಮವೇ ನಿಜವಾದ ಶಿಕ್ಷಣ ವಿದ್ಯಾರ್ಥಿಗಳು ಸರ್ವತೋಮುಖ ಬೆಳವಣಿಗೆಯಾಗಬೇಕೆಂದು ಶುಭ ಹಾರೈಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಾವರದ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸುಬ್ರಹ್ಮಣ್ಯರವರು ಮಾತನಾಡಿ ಸ್ಪರ್ಧಾತ್ಮಕ ಯುಗದಲ್ಲಿ ಜನತಾ ಕಾಲೇಜಿನ ಶೈಕ್ಷಣಿಕ ಕೊಡುಗೆ ಅತೀ ಅಮೂಲ್ಯವಾದದ್ದು ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡು ಉತ್ತಮ ನಾಗರಿಕರಾಗಿ ಹೊರಹೊಮ್ಮಿ ಎಂದು ಶುಭ ಹಾರೈಸಿದರು.
ಕಾಲೇಜಿನ ಶೈಕ್ಷಣಿಕ ಮಾರ್ಗದರ್ಶಕರಾದ ಚಿತ್ರಾ ಕಾರಂತ್ ರವರು ಭವಿಷ್ಯದ ಬಹುಪಯೋಗಿ ವಿವಿಧ ಕೋರ್ಸ್ ಗಳ ಕುರಿತು ಮಾತನಾಡಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಗುಣಮಟ್ಟದ ಶಿಕ್ಷಣ ಅತೀ ಮುಖ್ಯ ಎಂದು ಮಾರ್ಗದರ್ಶನ ನೀಡಿದರು.
ಕಳೆದ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ವಾರ್ಷಿಕ ಫಲಿತಾಂಶ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಗೈದ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಲಾಯಿತು.
ಸಮಾರಂಭದಲ್ಲಿ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಕಾಲೇಜಿನ ಉಪ ಪ್ರಾಂಶುಪಾಲರಾದ ರಮೇಶ್ ಪೂಜಾರಿ, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವಿದ್ಯಾರ್ಥಿ ಗಣೇಶ್ ಹಾಗೂ ಕಾರ್ಯದರ್ಶಿ ಸಿಂಚನಾ ಆರ್ ರಾವ್ , ವಿದ್ಯಾರ್ಥಿ ಪೋಷಕರು, ಕಾಲೇಜಿನ ಬೋಧಕ, ಬೋಧಕೇತರ ವೃಂದದವರ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಸ್ತುತ ಪಡಿಸಿದರು. ಉಪನ್ಯಾಸಕರಾದ ಉದಯ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿ ಉಪ ಪ್ರಾಂಶುಪಾಲರಾದ ಶ್ರೀ ರಮೇಶ್ ಪೂಜಾರಿ ವಂದಿಸಿದರು. ಪ್ರಾಂಶುಪಾಲರಾದ ಗಣೇಶ ಮೊಗವೀರರವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.











