ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ವಿಜಯ ಕುಮಾರ್ ಶೆಟ್ಟಿ ಆಯ್ಕೆ

0
378

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ: ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಡುಪಿ ಜಿಲ್ಲಾ ಘಟಕದ ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಯು ಸಂಘದ ಅಧ್ಯಕ್ಷ ಪ್ರಭಾಕರ ಜೈನ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಉಡುಪಿ ಬೋರ್ಡ್ ಹೈಸ್ಕೂಲ್ ಸಭಾಂಗಣದಲ್ಲಿ ಜರುಗಿತು.

ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಚುನಾವಣಾಧಿಕಾರಿಯಾಗಿ ರಾಜ್ಯ ಸಂಘದ ಉಪಾಧ್ಯಕ್ಷ ರಾಜಾರಾಮ ಶೆಟ್ಟಿ ನೂತನ ಸಮಿತಿಯ ಆಯ್ಕೆ ಪ್ರಕ್ರಿಯೆ ನೆರವೇರಿಸಿದರು. ಅಧ್ಯಕ್ಷರಾಗಿ ಸಾಯ್ಬರಕಟ್ಟೆ ಮಹಾತ್ಮಾ ಗಾಂಧಿ ಪ್ರೌಢಶಾಲೆಯ ವಿಜಯ ಕುಮಾರ್ ಶೆಟ್ಟಿ ಆಯ್ಕೆಯಾದರು.

Click Here

ಪ್ರಧಾನ ಕಾರ್ಯದರ್ಶಿಯಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಕ್ಕುಂಜೆ ಕೃಷ್ಣ ನಾಯ್ಕ್, ಕೋಶಾಧಿಕಾರಿಯಾಗಿ ನಿಟ್ಟೂರು ಪ್ರೌಢ ಶಾಲೆ ಅಶೋಕ್ ಆಯ್ಕೆಗೊಂಡರು. ಉಪಾಧ್ಯಕ್ಷರಾಗಿ ಮೂಕಾಂಬಿಕಾ ಪ್ರೌಢಶಾಲೆ ಹೊಸೂರು ಬೈಂದೂರಿನ ರವಿಶಂಕರ ಹೆಗ್ಡೆ, ಸೈಂಟ್ ಜೋಸೆಫ್ ಪ್ರೌಢ ಶಾಲೆ ಬೆಳ್ಮಣ್ಣು ಕಾರ್ಕಳ ಹರಿದಾಸ ಪ್ರಭು,ಸರಕಾರಿ ಹಿ.ಪ್ರಾ.ಶಾಲೆ ಹಳ್ಳಾಡಿ ಹರ್ಕಾಡಿ ಕುಂದಾಪುರ ಶರತ್ ಕುಮಾರ್ ಶೆಟ್ಟಿ,ಸರಕಾರಿ ಪ್ರೌಢಶಾಲೆ ಮೂಡುಗಿಳಿಯಾರು ಬ್ರಹ್ಮಾವರದ ಶೇಖರ್, ಎಸ್‍ವಿಎಸ್ ಪ್ರೌಢ ಶಾಲೆ ಕಟಪಾಡಿ ಉಡುಪಿ
ಕಿರಣ್ ಕುಮಾರ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿಗಳಾಗಿ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿಯ ಸೌಮ್ಯ ಅಮೀನ್,ಮೂಕಾಂಬಿಕಾ ಪ್ರೌಢ ಶಾಲೆ ಕೊಡ್ಲಾಡಿ ಬೈಂದೂರಿನ ಸಂತೋಷ್ ಕುಮಾರ್ ಶೆಟ್ಟಿ, ಸರಕಾರಿ ಹಿ.ಪಾ.್ರಶಾಲೆ ಬೆಳ್ವೆ ಕುಂದಾಪುರ ಕಿಶನ್‍ರಾಜ್ ಶೆಟ್ಟಿ, ಕ್ರೈಸ್ಟ್ ಕಿಂಗ್ ಹಿ.ಪ್ರಾ. ಶಾಲೆ ಕಾರ್ಕಳ ಪ್ರಕಾಶ್, ಸರಕಾರಿ ಪ.ಪೂ.ಕಾಲೇಜು ಬ್ರಹ್ಮಾವರ ಜಗದೀಶ್, ಮಾಧ್ಯಮ ಕಾರ್ಯದರ್ಶಿಯಾಗಿ ಸೈಂಟ್ ಮೇರಿಸ್ ಪ್ರೌಢಶಾಲೆ ಕುಂದಾಪುರದ ಚಂದ್ರಶೇಖರ ಬೀಜಾಡಿ, ಕ್ರೀಡಾ ಕಾರ್ಯದರ್ಶಿಯಾಗಿ ಸ.ಹಿ.ಪ್ರಾ.ಶಾಲೆ ಬಾಳ್ಕುದ್ರು ಬ್ರಹ್ಮಾವರದ ಶ್ರೀಕಾಂತ ಸಾಮಂತ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ ಬೈಂದೂರಿನ ಚಂದ್ರಶೇಖರ ಶೆಟ್ಟಿ,ಸ.ಹಿ.ಪ್ರಾ.ಶಾಲೆ ಕುಂದಾಪುರದ ಸುಮಂಗಲಾ ನಾಯಕ್ ಆಯ್ಕೆಗೊಂಡರು.

 

Click Here

LEAVE A REPLY

Please enter your comment!
Please enter your name here