ಕುಂದಾಪುರ: ಸಾಹಿತಿ ಇಂದ್ರಕುಮಾರ್ ಹೆಚ್.ಬಿ.ಗೆ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ

0
350

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಈ ವರ್ಷದ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಯು ಕಾದಂಬರಿಕಾರ, ಸಾಹಿತಿ, ಶಿಕ್ಷಕ ಇಂದ್ರ ಕುಮಾರ್ ಹೆಚ್.ಬಿ ಅವರ ” ಎತ್ತರ” ಕಾದಂಬರಿಗೆ ದೊರೆತಿದೆ. ಪ್ರಶಸ್ತಿಯು ಹದಿನೈದು ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಫಲಕವನ್ನೊಳಗೊಂಡಿದೆ. ಇದೇ ಆಗಸ್ಟ್ ತಿಂಗಳಲ್ಲಿ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆಯುವ ಸಾಹಿತ್ಯ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಪ್ರಶಸ್ತಿ ಆಯ್ಕೆ ಸಮಿತಿಯ ಪ್ರಕಟಣೆ ತಿಳಿಸಿದೆ.

Click Here

“ಎತ್ತರ” ಕಾದಂಬರಿಯ ಮೊದಲ ಆವೃತ್ತಿಯು 2022ರಲ್ಲಿ ಪ್ರಕಟಗೊಂಡಿತ್ತು. ಕಥೆಗಾರರಾಗಿ, ಕಾದಂಬರಿಕಾರರಾಗಿ ಈಗಾಗಲೇ ಸಾಕಷ್ಟು ಹೆಸರು ಮಾಡಿರುವ ಇಂದ್ರಕುಮಾರ್ ಸರಕಾರಿ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಿರಿಯ ಲೇಖಕರುಗಳಾದ ಡಿ.ಎಸ್.ಚೌಗುಲೆ, ಶ್ರೀನಿವಾಸ ಮೂರ್ತಿ, ಅನುಪಮಾ ಪ್ರಸಾದ್ ಅವರು ನಿರ್ಣಾಯಕರಾಗಿ ಸಹಕರಿಸಿದ್ದಾರೆ.l

Click Here

LEAVE A REPLY

Please enter your comment!
Please enter your name here