ಡಾ| ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ – 77ನೇ ಸ್ವಾತಂತ್ರ್ಯ ದಿನಾಚರಣೆ

0
510

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಸಿ.ಸಿ. ಮತ್ತು ಎನ್.ಎಸ್.ಎಸ್. ಘಟಕದಲ್ಲಿ ಆಯೋಜಿಸಿದ 77ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ. ಎಂ. ಸುಕುಮಾರ ಶೆಟ್ಟಿಯವರು ನೆರವೇರಿಸಿದರು. ಮಾತನಾಡಿ ಶಿಕ್ಷಣದಿಂದ ರಾಷ್ಟ್ರಪ್ರೇಮವನ್ನು ಬೆಳೆಸುವ ಮೂಲಕ ಸಧೃಡ ಭಾರತ ನಿರ್ಮಾಣ ಸಾಧ್ಯ ಎಂದು ಹೇಳಿದರು.

Click Here

ಈ ಸಂದರ್ಭ ಕಾಲೇಜಿನ ಪಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಎನ್.ಸಿ.ಸಿ. ಅಧಿಕಾರಿಗಳಾದ ಹರೀಶ್ ಬಿ., ಶರತ್ ಕುಮಾರ್, ಎನ್.ಎಸ್.ಎಸ್. ಸಹ ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ, ಬೋಧಕ-ಬೋಧಕೇತರ ಶಿಬ್ಬಂದಿಗಳು, ಎನ್.ಸಿ.ಸಿ., ಎನ್.ಎಸ್.ಎಸ್. ಹಾಗೂ ರೇಂಜರ್ಸ್ & ರೋವರ್ಸ್ ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕನ್ನಡ ಉಪನ್ಯಾಸಕಿ ರೇಷ್ಮಾ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಎನ್.ಸಿ.ಸಿ. ಕೆಡೆಟ್ ದಿವ್ಯಾ ಅವರಿಂದ ರೈಫಲ್ ಶೂಟಿಂಗ್ ಪ್ರಾತ್ಯಕ್ಷಿಕೆ ನಡೆಯಿತು.

Click Here

LEAVE A REPLY

Please enter your comment!
Please enter your name here