ಕುಂದಾಪುರ ಮಿರರ್ ಸುದ್ದಿ..
ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳು ಕೋಟ ಸೇರಿದಂತೆ ವಿವಿಧ ಭಾಗಗಳ ಸಾಧಕ ಕೃಷಿಕನನ್ನು ಗುರುತಿಸುವ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಗೆ ಇದೀಗ 28ರ ಸಂಭ್ರಮ ಆ ಪ್ರಯುಕ್ತ ಸಾಧಕ ಕೃಷಿಕನ ಮನೆಯಂಗಳಕ್ಕೆ ತೆರಳಿ ಕೃಷಿ ಪರಿಕರವನ್ನು ನೀಡಿ ಗೌರವಿಸುವ ಕಾರ್ಯ ಇದೇ ಬರುವ ಆ.20ರ ಬೆಳಿಗ್ಗೆ 10.ಗ ನಡೆಯಲಿದ್ದು ತೆಕ್ಕಟ್ಟೆ ಪರಿಸರದ ಸಾಂಪ್ರದಾಯಿಕ ಕೃಷಿ ಕಾಯಕ ಜೀವಿ ಶೇಷು ದೇವಾಡಿಗ ಇವರನ್ನು ಆಯ್ಕೆಗೊಳಿಸಲಾಗಿದೆ ಎಂದು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ಪ್ರಕಟಣೆಯಲ್ಲಿ ತಿಳಿದ್ದಾರೆ











