ಕುಂದಾಪುರ ಮಿರರ್ ಸುದ್ದಿ…
ಕೋಟ: ಪಂಚಶಕ್ತಿ ಸಂಘ ಕೋಡಿತಲೆ ಹೊಸಬೆಂಗ್ರೆ ಇದರ 2023 – 24ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಸಂಘದ ಮಹಾಸಭೆಯಲ್ಲಿ ನಡೆಯಿತು. ಅಧ್ಯಕ್ಷರಾಗಿ ಸಂದೇಶ ಖಾರ್ವಿ, ಉಪಾಧ್ಯಕ್ಷರಾಗಿ ವೀಕೇಶ ಬಂಗೇರ, ಕಾರ್ಯದರ್ಶಿಯಾಗಿ ಸಂದೀಪ ಖಾರ್ವಿ, ಜೊತೆ ಕಾರ್ಯದರ್ಶಿಯಾಗಿ ಶರತ ಖಾರ್ವಿ , ಕೋಶಾಧಿಕಾರಿಯಾಗಿ ಗಣೇಶ ಖಾರ್ವಿ ಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ನಿಕಟ ಪೂರ್ವ ಅಧ್ಯಕ್ಷ ದಿನೇಶ ಖಾರ್ವಿ ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು. ಎಂದು ಸಂಘದ ಗೌರವಾಧ್ಯಕ್ಷರಾದ ಮಡಿ ವಿಶ್ವನಾಥ ಖಾರ್ವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











