ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಕರ್ಕುಂಜೆ ಗ್ರಾಮ ಪಂಚಾಯತ್ನ ಮುಂದಿನ ಸಾಲಿನ ನೂತನ ಅಧ್ಯಕ್ಷರಾಗಿ ರಾಜೀವ ಶೆಟ್ಟಿ ಬಿಜ್ರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನಾಗರತ್ನ ಬಿ. ಆಯ್ಕೆಯಾಗಿದ್ದಾರೆ.
ಇಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು.
ಈ ಸಂದರ್ಭ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು, ಪಕ್ಷದ ಮುಖಂಡರಾದ, ಉದಯಕುಮಾರ ಶೆಟ್ಟಿ ಅಡಿಕೆಕೊಡ್ಲು, ಉದಯ್ ಪೂಜಾರಿ ಚಿತ್ತೂರು, ಕರ್ಕುಂಜೆ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಜಾಡ್ಕಟ್ಟು, ಗ್ರಾಮ ಪಂಚಾಯತ್ ಸದಸ್ಯರಾದ ನಾಗರಾಜ್ ಶೆಟ್ಟಿ ಜಡ್ಡಿನಕೊಡ್ಲು, ಸತೀಶ್ ಪೂಜಾರಿ, ಭಾಸ್ಕರ್ ಭೋವಿ, ಮಂಜುನಾಥ್ ಪೂಜಾರಿ ಬುದ್ದನಜೆಡ್ಡು, ಭಾಸ್ಕರ ನಾಯ್ಕ್, ಮೊದಲಾದವರು ಉಪಸ್ಥಿತರಿದ್ದರು.











