ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಪಿ.ಎಂ.ಪೋಷಣ್ ಅಕ್ಷರ ದಾಸೋಹ ಕಾರ್ಯಕ್ರಮದಡಿ ಶಾಲಾ ಮಕ್ಕಳಿಗೆ ಅಪೌಷ್ಠಿಕತೆ ಮತ್ತು ಅನಿಮಿಯ ನಿವಾರಣೆಗಾಗಿ ಸರ್ಕಾರಿ ಮತ್ತು ಅನುದಾನಿಕ ಶಾಲೆಗಳಲ್ಲಿ 1-10ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಕುಂದಾಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಇಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಚಾಲನೆ ನೀಡಿದರು.
ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟದೊಂದಿಗೆ ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆಯನ್ನು, ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣು, ಶೇಂಗಾ ಚಿಕ್ಕಿಯನ್ನು ವಿತರಿಸಲಾಗುತ್ತಿದೆ.











