ಸಿದ್ದಾಪುರ: ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಲು ಕಾರ್ಮಿಕರ ಮೆರವಣಿಗೆ ಧರಣಿ

0
483

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸರಕಾರ ಮೇಲ್ದರ್ಜೆಗೆ ಏರಿಸಲು ಆಗ್ರಹಿಸಿ ಸಿದ್ದಾಪುರ ಪೇಟೆಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ವರೆಗೆ ಕಟ್ಟಡ ಹಾಗೂ ಗೇರು ಬೀಜ ಕಾರ್ಖಾನೆ ಕಾರ್ಮಿಕರು ಹಾಗೂ ಗ್ರಾಮಸ್ಥರು ಮೆರವಣಿಗೆ ನಡೆಸಿ ಆರೋಗ್ಯ ಕೇಂದ್ರದ ಎದುರುಗಡೆ ಬೆಳಿಗ್ಗೆ ಪ್ರತಿಭಟನಾ ಧರಣಿ ನಡೆಸಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ ಜಿಲ್ಲೆಯಲ್ಲಿ ಪ್ರಮುಖವಾಗಿ ಬೆಳೆಯುತ್ತಿರುವ ಸಿದ್ದಾಪುರ ಜನತೆಗೆ ಮೂಲಭೂತ ಸೌಕರ್ಯವಾಗಿರುವ ಆರೋಗ್ಯ ಸೇವೆಯನ್ನು ಸರಕಾರ ನಿರಂತರವಾಗಿ ಕಡೆಗಣಿಸಿದೆ. ದಿನ ನಿತ್ಯ ಸುತ್ತಲ ಹಳ್ಳಿಗಳಿಂದ ನೂರಾರು ರೋಗಿಗಳು ಕೇಂದ್ರಕ್ಕೆ ಬರುತ್ತಿದ್ದರೂ ವೈದ್ಯರು ವಾರದ ಕೆಲವೇ ದಿನಗಳು ಮಾತ್ರ ಲಭ್ಯ ಇರುವುದರಿಂದ ಗ್ರಾಮಸ್ಥರಿಗೆ ತೊಂದರೆಯಾಗುತ್ತಿದೆ. ಸಂಜೆ 4.30 ಗಂಟೆ ಆಗುತ್ತಿದ್ದಂತೆ ಕೇಂದ್ರ ಮುಚ್ಚುತ್ತಿರುವುದು ರಾತ್ರಿ ಹೊತ್ತು ತುರ್ತು ಚಿಕಿತ್ಸೆ ಸಿಗದಿರುವುದು ದೂರದ 30 ಕಿಮೀ ಕುಂದಾಪುರಕ್ಕೆ ಹೋಗುವ ಸ್ಥಿತಿ ಜನರ ಪ್ರಾಣಕ್ಕೆ ಸಂಚಕಾರ ಬಂದಿದೆ ಎಂದು ಅವರು ಹೇಳಿದರು.

ಆರೋಗ್ಯ ಕೇಂದ್ರದಲ್ಲಿ ಸುಮಾರು 4 ಎಕರೆಗೂ ಮಿಕ್ಕಿ ವಿಸ್ತಾರ ಜಾಗದಲ್ಲಿ ಲ್ಯಾಬ್, ಶವಗಾರ, ಬೆಡ್, ಶೌಚಾಲಯ ವ್ಯವಸ್ಥೆ ಕಟ್ಟಡ ಇದ್ದರೂ ಸಿಬ್ಬಂದಿ ನೇಮಕ ಮಾಡದೇ ಗ್ರಾಮಸ್ಥರಿಗೆ ಸಿಗಬೇಕಾದ ಸೌಲಭ್ಯದಿಂದ ವಂಚಿಸಿದೆ ಮಾತ್ರವಲ್ಲದೇ ಶವ ಇಡಲು ಫ್ರೀಜರ್ ವ್ಯವಸ್ಥೆ ಇಲ್ಲದ ದಾರುಣ ಪರಿಸ್ಥಿತಿ ಇದೆ ಎಂದ ಅವರು ಸರಕಾರ ಕೂಡಲೇ ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆರಿಸಿ ಸಿದ್ದಾಪುರ ಮತ್ತು ಸುತ್ತಮುತ್ತಲಿನ ಜನರಿಗೆ ನ್ಯಾಯ ಒದಗಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಅವರು ಹೇಳಿದರು.

ಸಿಐಟಿಯು ತಾಲೂಕು ಸಂಚಾಲಕರಾದ ಚಂದ್ರಶೇಖರ ವಿ, ಕುಂದಾಪುರ ಕಟ್ಟಡ ಕಾರ್ಮಿಕರ ಸಂಘದ ಗೌರವಾಧ್ಯಕ್ಷ ಚಿಕ್ಕ ಮೊಗವೀರ ಮಾತನಾಡಿದರು.

Click Here

ಸಿಐಟಿಯು ಜಿಲ್ಲಾ ಮುಖಂಡರಾದ ಮಹಾಬಲ ವಡೇರಹೋಬಳಿ, ಕೆಲಸಗಾರರ ಸಂಘದ ಗಿರಿಜ ಆಚಾರ್,ಗಿರೀಜ ಶೆಡ್ತಿ,ಶಾರದ, ವೆಂಕಟೇಶ್ ಹೊಸಂಗಡಿ, ರತ್ನಾಕರ ಸಿದ್ದಾಪುರ, ವಿಠಲ,ಕ್ರಷ್ಣ ಪೂಜಾರಿ, ಜ್ಯೋತಿ,ಚಂದ್ರ ಕುಲಾಲ್ ಮೂಡುಬಗೆ ಮೊದಲಾದವರು ಇದ್ದರು.

ಕಟ್ಟಡ ಕಾರ್ಮಿಕರ ಸಂಘದ ಸಿದ್ದಾಪುರ ಘಟಕದ ಕಾರ್ಯದರ್ಶಿ ಪಿ ಟಿ ಅಲೆಕ್ಸಾಂಡರ್ ಸ್ವಾಗತಿಸಿದರು.

ಕಟ್ಟಡ ಕಾರ್ಮಿಕರ ಸಿದ್ದಾಪುರ ಅಧ್ಯಕ್ಷ ರಾಘವೇಂದ್ರ ಆಚಾರ್ಯ ವಂದಿಸಿದರು.

ಬೇಡಿಕೆಗಳು
1.ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಬೇಕು.ಹಗಲು ರಾತ್ರಿ ಸೇವೆ ನೀಡಬೇಕು.
2.ವಾರದ ಎಲ್ಲಾ ದಿನಗಳೂ ವೈದ್ಯರು ಜನರಿಗೆ ಲಭ್ಯ ಇರಬೇಕು, ಹೆಚ್ಚುವರಿ ವೈದ್ಯರನ್ನು ನೇಮಕ ಮಾಡಬೇಕು.
3.ಕೇಂದ್ರಕ್ಕೆ ಶವ ಇರಿಸಲು ಫ್ರೀಜರ್ ವ್ಯವಸ್ಥೆ ಮಾಡಬೇಕು.
4.ಶವಗಾರ, ಬೆಡ್, ಲ್ಯಾಬ್ ನಿರ್ವಹಿಸಲು ಅಗತ್ಯ ಸಿಬ್ಬಂದಿಗಳನ್ನು ನೇಮಿಸಬೇಕು.

ಮನವಿಯನ್ನು ಆರೋಗ್ಯ ಕೇಂದ್ರದ ಶಾಂತಪ್ಪ ಅವರ ಮೂಲಕ ಸರ್ಕಾರಕ್ಕೆ ಮನವಿ ನೀಡಲಾಯಿತು.

ಶಂಕರನಾರಾಯಣ ಸಹಾಯಕ ಉಪ ನಿರೀಕ್ಷಕ ಮಹಾಬಲ ಹಾಗೂ ಸಿಬ್ಬಂದಿ ಚಂದ್ರಶೇಖರ ಬಂದೋಬಸ್ತ್ ಏರ್ಪಡಿಸಿದರು.

Click Here

LEAVE A REPLY

Please enter your comment!
Please enter your name here