ಸೆ. 3ರಂದು ಯಡಾಡಿ ಮತ್ಯಾಡಿ ಲಿಟಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಸಾರ್ವಜನಿಕರಿಗೆ ಮುದ್ದು ಕೃಷ್ಣ, ಮುದ್ದು ರಾಧೆ ಸ್ಪರ್ಧೆ

0
826

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕರಿಗಾಗಿ ಕುಂದಾಪುರದ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮತ್ತು ಲಿಟ್ಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆಗಳ ಸಹಯೋಗದೊಂದಿಗೆ ಮುದ್ದು ಕೃಷ್ಣ, ಮುದ್ದು ರಾಧೆ ಸ್ಪರ್ಧೆಯನ್ನು ಹಮ್ಮಿಕೊಂಡಿದ್ದು, ಉಡುಪಿ ಜಿಲ್ಲೆಯ 1 ರಿಂದ 6ನೇ ವಯಸ್ಸಿನ ಮಕ್ಕಳು ಮುಕ್ತವಾಗಿ ಭಾಗವಹಿಸಲು ಅವಕಾಶವಿರುತ್ತದೆ.

Click Here

ಸೆಪ್ಟಂಬರ್ 03, 2023ರ ಭಾನುವಾರ ಸಮಯ 9:30ಕ್ಕೆ ಯಡಾಡಿ ಮತ್ಯಾಡಿ ಲಿಟಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.

ಎರಡು ವಿಭಾಗ : ಮುದ್ದು ಕೃಷ್ಣ, ಮುದ್ದು ರಾಧೆ ಸ್ಪರ್ಧೆಯನ್ನು ಎರಡು ವಿಭಾಗದಲ್ಲಿ ನಡೆಸಲಾಗುವುದು. 1 ವರ್ಷದಿಂದ 3 ವರ್ಷದ ಮಕ್ಕಳನ್ನು ಮತ್ತು 4 ವರ್ಷದಿಂದ 6 ವರ್ಷದವರೆಗಿನ ಮಕ್ಕಳನ್ನು ಎರಡು ಪ್ರತ್ಯೇಕ ವಿಭಾಗವನ್ನಾಗಿಸಿ ಸ್ಪರ್ಧೆ ಏರ್ಪಡಿಸಲಾಗಿದ್ದು, ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ನಗದು ಬಹುಮಾನದ ಜೊತೆಗೆ ಫಲಕ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಪ್ರಥಮ ಸ್ಥಾನ ಗಳಿಸಿದ ಮಕ್ಕಳಿಗೆ ರೂ.5,000, ದ್ವಿತೀಯ ಬಹುಮಾನ ರೂ.4000, ತೃತೀಯ ಬಹುಮಾನ ರೂ.3000 ಹಾಗೂ ಭಾಗವಹಿಸಿದ ಪ್ರತಿಸ್ಪರ್ಧಿಗಳಿಗೂ ಸ್ಮರಣಿಕೆ ಹಾಗೂ ಪ್ರಮಾಣ ಪತ್ರ ನೀಡಲಾಗುವುದು.

ಸ್ಪರ್ಧೆಯು ವೇಷಭೂಷಣ, ಹಾವಭಾವ, ಅಭಿನಯ, ಸೃಜನಶೀಲತೆಗೆ ಆದ್ಯತೆ ನೀಡುವುದರೊಂದಿಗೆ ಮಾತಿಗೆ ಯಾವುದೇ ಅವಕಾಶವನ್ನು ಒಳಗೊಂಡಿರುವುದಿಲ್ಲ, ಹಿನ್ನೆಲೆ ಸಂಗೀತ ಬಳಸಲು ದ್ವನಿವರ್ಧಕವನ್ನು ಮಕ್ಕಳಿಗೆ ಒದಗಿಸಲಾಗುವುದು. ಸ್ಪರ್ಧೆಯಲ್ಲಿ ತೀರ್ಪುಗಾರರ ತೀರ್ಪೆ ಅಂತಿಮವಾಗಿರುತ್ತದೆ. ಸ್ಪರ್ಧೆಗೆ ಹಾಜರಾಗುವ ಸ್ಪರ್ಧಾರ್ಥಿಗಳು ಜನನ ಪ್ರಮಾಣ ಪತ್ರದ ಪ್ರತಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ. ಜೊತೆಗೆ ಸ್ಪರ್ಧೆಯಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಗುಡ್ಡೆಅಂಗಡಿ (ಯಡಾಡಿ ಮತ್ಯಾಡಿ) ಬಸ್ ನಿಲ್ದಾಣದಿಂದ ಸ್ಕೂಲಿನ ತನಕ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಆಸಕ್ತರು 01/09/2023 ಶುಕ್ರವಾರದ ಒಳಗೆ ತಮ್ಮ ಹೆಸರನ್ನು ನೊಂದಾಯಿಸಲು 9740932487, 9964291755 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಮುಖ್ಯಸ್ಥರಾದ ಎಂ. ಮಹೇಶ್ ಹೆಗಡೆ, ಡಾ. ರಮೇಶ್ ಶೆಟ್ಟಿ, ಪ್ರತಾಪ್ ಚಂದ್ರ ಶೆಟ್ಟಿ ಮತ್ತು ಭರತ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click Here

LEAVE A REPLY

Please enter your comment!
Please enter your name here