ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಸುಜ್ಣಾನ ಎಜ್ಯುಕೇಶನ್ ಟ್ರಸ್ಟ್ ಪ್ರವರ್ತಿತ ಲಿಟ್ಲಸ್ಟಾರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಪದಗ್ರಹಣ ಹಾಗೂ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ ಆ ೨೯ರಂದು ಜರಗಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಧೀಶ ಅಬುಲ್ ರಹೀಂ ಹುಸೇನ್ ಶೇಖ್ ಮಾತನಾಡಿ, ವಿದ್ಯಾರ್ಥಿದಿಸೆಯಲ್ಲಿ ನಾಯಕತ್ವ ಬೆಳೆಸಿಕೊಳ್ಳಬೇಕು. ಆಗ ಮುಂದೆ ಮಾದರಿ ನಾಯಕನಾಗಿ ಬೆಳೆಯಲು ಸಾಧ್ಯ. ಶಿಕ್ಷಣದ ಜೊತೆ ಜೊತೆ ವ್ಯವಸ್ಥೆಗಳ ಅರಿವು, ಜ್ಞಾನ ಹೊಂದುವುದು ಅತ್ಯಗತ್ಯ. ಹಾಗೆಯೇ ಕಾನೂನು ತಿಳುವಳಿಕೆಯನ್ನು ಹೊಂದಬೇಕು. ಹಂತಹಂತವಾಗಿ ವಿದ್ಯಾರ್ಥಿಗಳು ಬೆಳವಣಿಗೆ ಹೊಂದಿದಂತೆ ಪಡೆದ ಅರಿವು ಭವಿಷ್ಯದಲ್ಲಿ ಅನುಕೂಲಕ್ಕೆ ಬರುತ್ತದೆ ಎಂದರು.
ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಮುಖ್ಯ ಅತಿಥಿ ಯಾಗಿ ಭಾಗವಹಿಸಿದ್ದರು.
ಸಂಸ್ಥೆಯ ಛೇರ್ ಮನ್ ಡಾ.ರಮೇಶ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಕುಂದಾಪುರ ದ ಹಿರಿಯ ಸಿವಿಲ್ ನ್ಯಾಯಧೀಶ ರಾಜು ಎನ್., ಕುಂದಾಪುರ ವಕೀಲರ ಸಂಘದ ಕಾರ್ಯದರ್ಶಿ ಜೆ.ಶ್ರೀನಾಥ್ ರಾವ್ ಅತಿಥಿಗಳಾಗಿ ಭಾಗವಹಿಸಿದ್ದರು.
ಸಂಸ್ಥೆಯ ಕಾರ್ಯದರ್ಶಿ ಪ್ರತಾಪಚಂದ್ರ ಶೆಟ್ಟಿ, ಕೋಶಾಧಿಕಾರಿ ಭರತ್ ಶೆಟ್ಟಿ, ಪ್ರಾಂಶುಪಾಲ ಆಗಸ್ಟಿನ್, ವಿದ್ಯಾರ್ತಿ ಸಂಸತ್ ಸಲಹೆಗಾರ ಸತೀಶ್, ಶಾಲಾವಿದ್ಯಾರ್ತಿ ನಾಯಕಿ ಪ್ರಾವ್ಯ ಉಪಸ್ಥಿತರಿದ್ದರು.
.











