ಕುಂದಾಪುರ: ಹೊಸ ಆಲೋಚನಾ ಶಕ್ತಿ ಹೆಚ್ಚಿಸುವ ಸಾಮರ್ಥ್ಯ ಸಾಹಿತ್ಯಕ್ಕಿದೆ – ಹೆಚ್.ಬಿ ಇಂದ್ರಕುಮಾರ್

0
411

Click Here

Click Here

ಹೆಚ್.ಬಿ ಇಂದ್ರಕುಮಾರ್ ಅವರಿಗೆ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಮತ್ತು ತಳಿಕಂಡಿ ಕುಂದಾಪ್ರ ಕನ್ನಡ ಸಾಂಸ್ಕೃತಿಕ ಕೋಶ ಪುಸ್ತಕ ಲೋಕಾರ್ಪಣೆ

ಕುಂದಾಪುರ ಮಿರರ್ ಸುದ್ದಿ….
ಕುಂದಾಪುರ: ಸಾಹಿತ್ಯ ಕ್ಷೇತ್ರಕ್ಕೆ ಅಗಾಧವಾದ ಶಕ್ತಿಯಿದ್ದು, ಅದು ನಮ್ಮನ್ನು ಹೆಚ್ಚು ಹೆಚ್ಚು ಆಲೋಚಿಸುವಂತೆ ಮಾಡುತ್ತದೆ. ಸಾಹಿತ್ಯ ಭಿನ್ನ ನೆಲೆಗಳ ಹುಡುಕಾಟಕ್ಕೆ ಅನುವು ಮಾಡಿಕೊಡುತ್ತದೆ ಎಂದು ಹೆಚ್.ಬಿ ಇಂದ್ರಕುಮಾರ್ ಹೇಳಿದರು.

ಆಗಸ್ಟ್ 30ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ನಡೆದ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ತಳಿಕಂಡಿ ಕುಂದಾಪ್ರ ಕನ್ನಡ ಸಾಂಸ್ಕೃತಿಕ ಕೋಶ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

Click Here

ಸಾಹಿತ್ಯದ ಕಥೆ ಕಾದಂಬರಿ ಕವನ ಸಂಕಲನಗಳನ್ನು ಬೇರೆ ಬೇರೆ ನೆಲೆಗಳಲ್ಲಿ ಅರ್ಥೈಸಬಹುದು. ಕೆಲವು ಸಂದರ್ಭಗಳಲ್ಲಿ ಸಾಹಿತ್ಯ ರಚನೆಗಳ ವಸ್ತು ತುಂಬಾ ಚೆನ್ನಾಗಿರುತ್ತದೆ ಮತ್ತು ಓದುಗರನ್ನು ಚಿಂತನೆಗೆ ಒಳಪಡಿಸಿ ಓದುವಂತೆ ಮಾಡುತ್ತದೆ. ಅಲ್ಲದೆ ಓದುಗರನ್ನು ಇನ್ನೂ ಹೆಚ್ಚು ಆಕರ್ಷಿಸುವಂತೆ ಮತ್ತು ಓದುವಂತೆ ಸಾಹಿತ್ಯದ ರಚನೆಯಾಗಬೇಕು. ಯಾವುದೇ ಸಾಹಿತ್ಯ ರಚನೆಯಲ್ಲಿ ಭಾಷೆ, ಸಮೃದ್ಧ, ನಿಗೂಢತೆ ಮತ್ತು ಮನಸಿಗೆ ಹಿತವೆನಿಸುವ ವಿಸ್ಮಯಗಳ ಹೂರಣವನ್ನು ಸಾಹಿತ್ಯವು ಒಳಗೊಂಡಿದ್ದರೆ ಓದುಗರನ್ನು ಹೆಚ್ಚು ಆಕರ್ಷಿಸುತ್ತದೆ. ಮನುಷ್ಯನ ಸಂವೇದನೆಯಲ್ಲಿಯೇ ಸಾಹಿತ್ಯ ಅಡಗಿದೆ. ಸಮಯದ ಪರಿವೆಯೇ ಇಲ್ಲದೆ ನಮ್ಮನ್ನು ಯಾವುದೋ ಲೋಕಕ್ಕೆ ಪ್ರವೇಶ ಮಾಡಿಸುವ ಶಕ್ತಿ ಸಾಹಿತ್ಯಕ್ಕೆ ಇದೆ. ಹಾಗೆ ಈ ಪ್ರಶಸ್ತಿಯು ನನ್ನ ಬರವಣಿಗೆಯ ಜವಾಬ್ದಾರಿಯನ್ನು ಇಮ್ಮಡಿಗೊಳಿಸಿದೆ ಎಂದರು.

ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಹೆಚ್.ಶಾಂತಾರಾಮ್ ಅವರು ಮಾತನಾಡಿ ಸಾಹಿತ್ಯ ಸೇವೆ ಮುಂದುವರಿಯಲಿ ಎಂದು ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ.ಶಾಂತಾರಾಮ ಪ್ರಭು ಮಾತನಾಡಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯ, ಸಂಗೀತ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಿ ಮತ್ತು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ. ಈ ಪ್ರಶಸ್ತಿ ತುಂಬಾ ಶ್ರೇಷ್ಠವಾದದ್ದು ಎಂದು ಹೇಳಿದರು.

ತಳಿಕಂಡಿ – ಕುಂದಾಪ್ರ ಕನ್ನಡ ಸಾಂಸ್ಕೃತಿಕ ಕೋಶವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಕುಂದಾಪುರ ತಾಲೂಕಾ ತಹಶೀಲ್ದಾರ್ ಶೋಭಲಕ್ಷ್ಮಿ ಅವರು ಭಾಷೆ ಎಂದರೆ ಬದುಕು. ಭಾಷೆ ಎಂದರೆ ಸಂಸ್ಕೃತಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿಶ್ವಸ್ಥ ಮಂಡಳಿಯ ಸದಸ್ಯರಾದ ದೇವದಾಸ್ ಕಾಮತ್ ಮತ್ತು ರಾಜೇಂದ್ರ ತೋಳಾರ್ ಉಪಸ್ಥಿತರಿದ್ದರು. ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಆಯ್ಕೆ ಸಮಿತಿಯ ಸಂಚಾಲಕರಾದ ಡಿ.ರೇಖಾ ಬನ್ನಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಸ್ವಾಗತಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ.ಗೊಂಡ ವಂದಿಸಿದರು. ಕನ್ನಡ ಉಪನ್ಯಾಸಕರಾದ ಮೈತ್ರಿ “ತಳಿಕಂಡಿ” ಪುಸ್ತಕದ ಕುರಿತು ಮಾತನಾಡಿದರು. ಆಂಗ್ಲ ಭಾಷಾ ಉಪನ್ಯಾಸಕಿ ರೋಹಿಣಿ ಹೆಚ್.ಬಿ ಕಾರ್ಯಕ್ರಮ ನಿರೂಪಿಸಿದರು.

Click Here

LEAVE A REPLY

Please enter your comment!
Please enter your name here