ಕೋಟ :ವಿದ್ಯಾರ್ಥಿಗಳ ಭವಿಷ್ಯದ ಭದ್ರ ಬುನಾದಿಗೆ ಶಿಕ್ಷಕರ ಪಾತ್ರ ಗಣನೀಯವಾದದ್ದು- ಸತೀಶ್ ಕುಂದರ್

0
366

Click Here

Click Here

ಪಂಚವರ್ಣ ಸಂಸ್ಥೆಯ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಗುರುವಂದನೆ

ಕುಂದಾಪುರ ಮಿರರ್ ಸುದ್ದಿ…

ಕೋಟ: ವಿದ್ಯಾರ್ಥಿಗಳ ಭದ್ರ ಬುನಾದಿಗೆ ಶಿಕ್ಷಕರ ಪಾತ್ರ ಗಣನೀಯವಾದದ್ದು ಈ ದಿಸೆಯಲ್ಲಿ ಗುರುಗಳನ್ನು ಕಾಲಕ್ಕೆ ತಕ್ಕಂತೆ ನೆನಪಿಸಿಕೊಂಡು ಅವರು ನೀಡಿದ ವಿದ್ಯಾರ್ಜನೆ ಸದಾ ಸ್ಮರಿಸುತ್ತಿರಬೇಕು ಎಂದು ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಅಭಿಪ್ರಾಯಪಟ್ಟರು.

ಕೋಟದ ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಆಶ್ರಯದಲ್ಲಿ ಶಿಕ್ಷಕರ ದಿನಾಚಣೆ ಪ್ರಯುಕ್ತ ಗುರುವಂದನೆ ಕಾರ್ಯಕ್ರಮದಲ್ಲಿ ಕೋಟದ ಗಿಳಿಯಾರು ಶಾಂಭವೀ ಶಾಲೆಯ ಹಿರಿಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಮಾಲಿಂಗ್ ಮಾಸ್ಟ್ರ್ ಎಂದೆ ಜನಜನಿತರಾದ ಮಹಾಲಿಂಗ ದೇವಾಡಿಗ ಇವರಿಗೆ ಸ್ವಗೃಹಕ್ಕೆ ತೆರಳಿ ಗುರುವಂದನೆ ಸಲ್ಲಿಸಿ ಮಾತನಾಡಿದರು.

Click Here

ಈ ಸಂದರ್ಭದಲ್ಲಿ ಗುರುವಂದನೆ ಅರ್ಥಪೂರ್ಣವಾಗಿಸುವ ನಿಟ್ಟಿನಲ್ಲಿ ಗುರುಗಳ ಮೂಲಕ ಗಿಡನೆಟ್ಟು ಸಂಭ್ರಮಿಸಲಾಯಿತು.
ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ವಹಿಸಿದ್ದರು.

ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಕಲಾವತಿ ಅಶೋಕ್, ಪಂಚವರ್ಣ ಸಂಸ್ಥೆಯ ಉಪಾಧ್ಯಕ್ಷ ರವೀಂದ್ರ ಜೋಗಿ,ಸಂತೋಷ್ ಪೂಜಾರಿ,ಪಂಚವರ್ಣ ಮಹಿಳಾ ಮಂಡಲದ ಕಾರ್ಯದರ್ಶಿ ಲಲಿತಾ ಪೂಜಾರಿ, ಪಂಚವರ್ಣದ ಪದಾಧಿಕಾರಿಗಳು, ಮಹಾಲಿಂಗ ಮಾಸ್ಟರ್ ಕುಟುಂಬಿಕರು ಉಪಸ್ಥಿತರಿದ್ದರು.

ಪಂಚವರ್ಣ ಮಹಿಳಾ ಮಂಡಲದ ಸದಸ್ಯೆ ಸುಜಾತ ಬಾಯರಿ ಸ್ವಾಗತಿಸಿ ನಿರೂಪಿಸಿದರು. ಪಂಚವರ್ಣದ ಸದಸ್ಯ ಕೇಶವ ಆಚಾರ್ ವಂದಿಸಿದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.

Click Here

LEAVE A REPLY

Please enter your comment!
Please enter your name here