ಕುಂದಾಪುರ :ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಂದ ಬೀದಿ ನಾಟಕ ಪರಿಸರ – ‘ನಮಗೊಂದಿಷ್ಟು ಉಳಿಸಿ’

0
181

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಪುರಸಭೆಯ ಜಂಟಿ ಆಶ್ರಯದಲ್ಲಿ ನಗರದ ತಾಲೂಕ್ ಪಂಚಾಯತ್ ಮುಂಭಾಗ ಮತ್ತು ಕುಂದಾಪುರ ಸಂತೆ ಮಾರುಕಟ್ಟೆಯಲ್ಲಿ ಪರಿಸರ – ‘ನಮಗೊಂದಿಷ್ಟು ಉಳಿಸಿ’ ಬೀದಿ ನಾಟಕ ಪ್ರದರ್ಶನ ನಡೆಯಿತು.

Click Here

ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆ ಕುರಿತ ಈ ಬೀದಿ ನಾಟಕವನ್ನು ಅಂತಿಮ ಬಿ.ಸಿ.ಎ. ವಿದ್ಯಾರ್ಥಿ ದೇವಿಪ್ರಸಾದ್ ಶೆಟ್ಟಿ ರಚಿಸಿ, ಅಂತಿಮ ಬಿ.ಎಸ್ಸಿ. ವಿದ್ಯಾರ್ಥಿ ಲಕ್ಷ್ಮಿಕಾಂತ್ ನಿರ್ದೇಶನ ಮಾಡಿದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಹಾಗೂ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ ಟಿ.ಎನ್., ನಿರ್ವಹಣಾ ವಿಭಾಗದ ಸಹ ಪ್ರಾಧ್ಯಾಪಕ ಪ್ರವೀಣ್ ಮೊಗವೀರ ಗಂಗೊಳ್ಳಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಎನ್.ಎಸ್.ಎಸ್. ಸಹ ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ ಕಾರ್ಯಕ್ರಮ ಸಂಯೋಜಿಸಿದರು.

ಈ ಸಂದರ್ಭ ಕಛೇರಿ ಸಿಬ್ಬಂದಿ ರಮೇಶ್ ಮೊಗವೀರ, ರಾಮಕೃಷ್ಣ ಕಾಂತು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here