ಕುಂದಾಪುರ :ಸದ್ಗುರು ಜಗಜೀತ್ ಸಿಂಗ್ ರಾಷ್ಟ್ರೀಯ ಮಟ್ಟದ ಸಂಗೀತ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೇದಾರ್ ಮರವಂತೆ ದ್ವಿತೀಯ ಸುತ್ತಿಗೆ ಆಯ್ಕೆ

0
846

Click Here

Click Here

ಕುಂದಾಪುರ ಮಿರರ್ ಸುದ್ದಿ…

ಹೆಮ್ಮಾಡಿ :ಪಂಜಾಬ್ ರಾಜ್ಯದ ಲುಧಿಯಾನದ ಶ್ರೀ ಬೈನಿ ಸಾಹಿಬ್ ಗುರುದ್ವಾರ ನಡೆಸುವ ರಾಷ್ಟ್ರೀಯ ಮಟ್ಟದ ಹಿಂದುಸ್ಥಾನಿ ಖಯಾಲ್ ಗಾಯಕಿ ಕಿರಿಯರ ವಿಭಾಗದ ಆನ್ ಲೈನ್ ಸಂಗೀತ ಸ್ಪರ್ಧೆಯ ಪ್ರಥಮ ಸುತ್ತಿನಲ್ಲಿ ತೇರ್ಗಡೆಯಾದ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿ ಕೇದಾರ್ ಮರವಂತೆ ದ್ವಿತೀಯ ಸುತ್ತಿನ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ.ದ್ವಿತೀಯ ಸುತ್ತಿನ ಸ್ಪರ್ಧೆಯು ಮಹಾರಾಷ್ಟ್ರದ ಪುಣೆಯಲ್ಲಿ ಇದೇ ನವೆಂಬರ್ 4ಮತ್ತು 5 ರಂದು ನಡೆಯಲಿದೆ.

Click Here

ರಾಷ್ಟ್ರೀಯ ಮಟ್ಟದ ಸಂಗೀತ ಸ್ಪರ್ಧೆಗೆ ಆಯ್ಕೆಯಾದ ಕಾಲೇಜಿನ ಉದಯೋನ್ಮುಖ ಪ್ರತಿಭೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಶುಭ ಹಾರೈಸಿ ಅಭಿನಂದನೆ ಸಲ್ಲಿಸಿದ್ದಾರೆ.

Click Here

LEAVE A REPLY

Please enter your comment!
Please enter your name here