ಕುಂದಾಪುರ: ಬಿಜೆಪಿಯಿಂದ ಪದವೀಧರ ಶಿಕ್ಷಣ ಕ್ಷೇತ್ರದ ಮತದಾರರ ಪಟ್ಟಿ ಅಭಿಯಾನಕ್ಕೆ ಚಾಲನೆ

0
686

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಮುಂಬರುವ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕುಂದಾಪುರದ ಮತದಾರರ ಪಟ್ಟಿಗೆ ಹೆಸರು ಸೇರಿಸುವ ಅಭಿಯಾನಕ್ಕೆ ಕುಂದಾಪುರ ಬಿಜೆಪಿ ಚಾಲನೆ ನೀಡಿತು.

Click Here

ಭಾರತೀಯ ಜನತಾಪಕ್ಷದ ಕಾರ್ಯಾಲಯದಲ್ಲಿ ಆರಂಭಗೊಂಡ ಆಭಿಯಾನದಲ್ಲಿ ಹೊಸದಾಗಿ ಸೇರ್ಪಡೆಗೊಳ್ಳಲಿರುವ ಪಟ್ಡಿಯನ್ನು ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಬಿಡುಗಡೆಗೊಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಮಂಡಲ ಬಿಜೆಪಿ ಅಧ್ಯಕ್ಷ ಶಂಕರ್ ಅಂಕದಕಟ್ಟೆ ವಹಿಸಿದರು. ಸಂಚಾಲಕಿ ಗೀತಾಂಜಲಿ ಸುವರ್ಣ ಮಾಹಿತಿ ನೀಡಿದರು. ಮಂಡಲ ಕಾರ್ಯದರ್ಶಿ ಸುರೇಂದ್ರ ಕಾಂಚನ್ ಸಂಗಮ್ ನಿರೂಪಿಸಿ ವಂದಿಸಿದರು.

ಜಿಲ್ಲಾ ಎಸ್.ಸಿ. ಮೋರ್ಚದ ಅಧ್ಯಕ್ಷ ಗೋಪಾಲ್ ಕಳಂಜಿ, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ವಿವಿಧ ಮೋರ್ಚಾದ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here