ಕೋಟ :ಪಂಚವರ್ಣ ಸಂಸ್ಥೆ ರಾಜ್ಯಕ್ಕೆ ಮಾದರಿ ಸಂಘಸಂಸ್ಥೆಯಾಗಿ ಹೊರಹೊಮ್ಮಿದೆ – ಆನಂದ್ ಸಿ ಕುಂದರ್

0
370

Click Here

Click Here

ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನದ ಪೋಸ್ಟರ್ ಅನಾವರಣ ಕಾರ್ಯಕ್ರಮ

ಕುಂದಾಪುರ ಮಿರರ್ ಸುದ್ದಿ…
ಕೋಟ: ಪಂಚವರ್ಣ ಸಂಘಟನೆ ರಾಜ್ಯಕ್ಕೆ ಮಾದರಿ ಸಂಸ್ಥೆಯಾಗಿ ಹೊರಹೊಮ್ಮಿದೆ ಎಂದು ಸಮಾಜ ಸೇವಕ ಆನಂದ್ ಸಿ ಕುಂದರ್ ಹೇಳಿದರು.

ಮಂಗಳವಾರ ಆನಂದ್ ಸಿ ಕುಂದರ್ ಗೃಹದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತ್ರತ್ವದಲ್ಲಿ ನ.10ರಂದು ಕೋಟ ಗಾಂಧಿ ಮೈದಾನದಲ್ಲಿ ನಡೆಯಲಿರುವ ಸದ್ಭಾವನಾ ಶೀರ್ಷಿಕೆಯಡಿ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಪೋಸ್ಟರ್ ಅನಾವರಗೊಳಿಸಿ ಮಾತನಾಡಿ ಪರಿಸರಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ನಿತ್ಯ ನಿರಂತರವಾಗಿಸಿ, ಪ್ಲಾಸ್ಟಿಕ್ ಮುಕ್ತ, ಹಸಿರು ಕ್ರಾಂತಿ, ವಿದ್ಯಾರ್ಥಿಗಳನ್ನು ದತ್ತು ಪಡೆಯುವ, ಪರಿಸರ ಜಾಗೃತಿ, ರೈತರನ್ನು ಗುರುತಿಸುವ ಹೀಗೆ ಹತ್ತು ಹಲವು ಕಾರ್ಯಕ್ರಮಗಳು ಗ್ರಾಮೀಣ ಭಾಗವಾಗ ಈ ಪರಿಸರಕ್ಕೆ ಹೊಸ ಆಯಾಮವನ್ನು ತಂದಿರಿಸಿದೆ, ಇಂಥಹ ಸಂಸ್ಥೆ ನಮ್ಮೂರಿನಲ್ಲಿ ಇರುವುದು ನಮ್ಮ ಹೆಮ್ಮೆ ಇದೇ ರೀತಿ ಇತರ ಸಂಘ ಸಂಸ್ಥೆಗಳು ಅನುಸರಿಸಲಿ ಎಂದು ಶುಭಹಾರೈಸಿದರು.

Click Here

ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ಯ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್, ಕೋಟ ಗ್ರಾಮಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿ ಶೆಟ್ಟಿ, ಕೋಟದ ಪರಿವರ್ತನಾ ಪುನರ್ವಸತಿ ಕೇಂದ್ರದ ನಿರ್ದೇಶಕ. ಡಾ.ಪ್ರಕಾಶ್ ಸಿ ತೋಳಾರ್, ನೋಟರಿ ವಕೀಲರಾದ ಕರುಣಾಕರ್ ನಾಯ್ಕ್, ಜನತಾ ಸಂಸ್ಥೆಯ ನಿರ್ದೇಶಕ ಪ್ರಶಾಂತ್ ಕುಂದರ್, ಗೀತಾನಂದ ಫೌಂಡೇಶನ್ ನಿರ್ದೇಶಕಿ ಗೀತಾ ಎ ಕುಂದರ್, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಕೃಷಿಕ ಭಾಸ್ಕರ್ ಶೆಟ್ಟಿ , ರೈತ ಧ್ವನಿ ಸಂಘ ಕೋಟ ಇದರ ಅಧ್ಯಕ್ಷ ಎಂ ಜಯರಾಮ ಶೆಟ್ಟಿ, ಪಂಚವರ್ಣ ಯುವಕ ಮಂಡಲದ ಗೌರವಾಧ್ಯಕ್ಷ ಸತೀಶ್ ಹೆಚ್ ಕುಂದರ್, ಪಂಚವರ್ಣ ದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಕಾರ್ಯದರ್ಶಿ ಲಲಿತಾ ಪೂಜಾರಿ, ಉಪಾಧ್ಯಕ್ಷೆ ವಸಂತಿ ಹಂದಟ್ಟು, ಸ್ಥಾಪಾಕ ಸದಸ್ಯ ನರಸಿಂಹ ಗಾಣಿಗ, ಮಣೂರು ಫ್ರೆಂಡ್ಸ್ ಅಧ್ಯಕ್ಷ ದಿನೇಶ್ ಆಚಾರ್ಯ, ಪಂಚವರ್ಣದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ಸದಸ್ಯ ಸಂತೋಷ ಕುಮಾರ್ ಕೋಟ ಸ್ವಾಗತಿಸಿದರು. ಮಹಿಳಾ ಮಂಡಲದ ಸದಸ್ಯೆ ಸುಜಾತ ಬಾಯರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿ ವಂದಿಸಿದರು.

Click Here

LEAVE A REPLY

Please enter your comment!
Please enter your name here