ಕುಂದಾಪುರ ಮಿರರ್ ಸುದ್ದಿ…
ಕೋಟ: ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಕೃಷಿ ವಿಜ್ಞಾನ ಕೇಂದ್ರ, ಬ್ರಹ್ಮಾವರ ಮತ್ತು ಕೋಟ ಸಹಕಾರಿ ವ್ಯವಸಾಯಕ ಸಂಘ ಕೋಟ ಇವರ ಸಂಯುಕ್ತ ಆಶ್ರಯದಲ್ಲಿ “ಮಣ್ಣು ಪರೀಕ್ಷೆ ಮಾಹಿತಿ ಕಾರ್ಯಾಗಾರ ಇತ್ತೀಚಿಗೆ ಕೋಟ ಸಹಕಾರಿ ವ್ಯವಸಾಯಕ ಸಂಘದ ಪ್ರಧಾನ ಕಛೇರಿಯ ಬಿ. ಸಿ. ಹೊಳ್ಳ ಸಹಕಾರ ಸಭಾಭವನದಲ್ಲಿ ಜರಗಿತು.
ರೋಟರಿ ಜಿಲ್ಲೆ 3182ರ ಜಿಲ್ಲಾ ಗವರ್ನರ್ ಬಿ. ಸಿ. ಗೀತಾ ಇವರು ಮಣ್ಣು ಪರೀಕ್ಷೆ ಮಾಹಿತಿ ಕಾರ್ಯಾಗಾರವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.
ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇದರ ಅಧ್ಯಕ್ಷ ದೇವಪ್ಪ ಪಟಗಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ರೋಟರಿ ಜಿಲ್ಲೆ 3182, ವಲಯ-2ರ ಸಹಾಯಕ ಗವರ್ನರ್ ಪಿಎಚ್ಎಫ್ ನರಸಿಂಹ ಪ್ರಭು, ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಕೃಷಿ ವಿಜ್ಞಾನ ಕೇಂದ್ರ, ಬ್ರಹ್ಮಾವರ ಇದರ ಬೇಸಾಯ ಶಾಸ್ತ್ರ ವಿಭಾಗದ ವಿಜ್ಞಾನಿಗಳಾದ ಡಾ. ನವೀನ ಇವರು ಮಣ್ಣು ಪರೀಕ್ಷೆ ಬಗ್ಗೆ ಮಾಹಿತಿ ನೀಡಿದರು.
ಸಂಘದ ಕಾರ್ಯವ್ಯಾಪ್ತಿಯ ಕೃಷಿಕ ಭಾಂಧವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆದರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಸಂಘದ ಅಧ್ಯಕ್ಷ ಜಿ. ತಿಮ್ಮ ಪೂಜಾರಿ ಧನ್ಯವಾದ ಸಮರ್ಪಿಸಿದರು. ಸಂಘದ ಸಿಬ್ಬಂದಿಗಳಾದ ಸಂಧ್ಯಾ ಪ್ರಾರ್ಥಿಸಿದರು. ಸಂಘದ ಸಿಬ್ಬಂದಿ ಶಾಲಿನಿ ಹಂದೆ ಕಾರ್ಯಕ್ರಮ ನಿರೂಪಿಸಿದರು.











