ಸುಜಯೀಂದ್ರ ಹಂದೆಯವರಿಗೆ ಸನ್ಮಾನ

0
882

Click Here

Click Here

ಕುಂದಾಪುರ ಮಿರರ್ ಸುದ್ದಿ…
ಕೋಟ:
ಬೆಂಗಳೂರಿನ ಯಕ್ಷದೇಗುಲ ತಂಡ ಭಾರತ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ಕೋಟ ಹಂದೆ ಶ್ರೀ ವಿಷ್ಣುಮೂರ್ತಿ ವಿನಾಯಕ ದೇವಳದ ಪ್ರಾಂಗಣದಲ್ಲಿ ಆಯೋಜಿಸಿದ ರುರು-ಪ್ರಮದ್ವರ ಯಕ್ಷಗಾನ ಪ್ರಸಂಗದ ಪ್ರಥಮ ಪ್ರದರ್ಶನದಲ್ಲಿ ಪ್ರಸಂಗಕರ್ತ, ಯಕ್ಷಗಾನ ವಿದ್ವಾಂಸರಾದ ಸುಜಯೀಂದ್ರ ಹಂದೆ ಎಚ್ ಇವರನ್ನು ಸನ್ಮಾನಿಸಲಾಯಿತು.

Click Here

ವೇದಿಕೆಯಲ್ಲಿ ಬಹುಮೇಳಗಳ ಯಜಮಾನರಾದ ಪಿ. ಕಿಶನ್ ಹೆಗ್ಡೆ, ರಾಷ್ಟ್ರೀಯ ರಂಗ ನಿರ್ದೇಶಕ ಗೋಪಾಲಕೃಷ್ಣ ನಾಯಿರಿ, ಸಾಲಿಗ್ರಾಮ ಗುರುನರಸಿಂಹ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಕೆ. ಎಸ್. ಕಾರಂತ, ತ್ರಿಕಣ್ಣೇಶ್ವರಿ ಮಾಸ ಪತ್ರಿಕೆಯ ಸಂಪಾದಕರಾದ ತೇಜೇಶ್ವರ ರಾವ್, ಸಾಲಿಗ್ರಾಮ ಮಕ್ಕಳ ಮೇಳದ ನಿರ್ದೇಶಕ ಶ್ರೀಧರ ಹಂದೆ, ಕರ್ನಾಟಕ ಕಲಾದರ್ಶಿನಿ ಮಂಗಳೂರಿನ ಜನಾರ್ದನ ಹಂದೆ, ಹಂದೆ ದೇವಸ್ಥಾನ ಆಡಳಿತ ಮಂಡಳಿ ಸದಸ್ಯ ವೆಂಕಟರಮಣ ಸೋಮಾಯಾಜಿ, ಹಂದೆ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಅಮರ ಹಂದೆ, ಕೋಟ ಸುದರ್ಶನ ಉರಾಳ ಹಾಗೂ ಉಪನ್ಯಾಸಕ ರಾಘವೇಂದ್ರ ತುಂಗರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here