ಕುಂದಾಪುರ: ಮತ್ತೊಮ್ಮೆ ಮೋದಿ ಗೋಡೆ ಬರಹಕ್ಕೆ ಕುಂದಾಪುರದಲ್ಲಿ ಚಾಲನೆ

0
347

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಕೋಟೇಶ್ವರ ಮಹಾಶಕ್ತಿ ಕೇಂದ್ರದ ವತಿಯಿಂದ ಮುಂದಿನ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಮತ್ತೊಮ್ಮೆ ಮೋದಿ 3.0 ಗೋಡೆ ಬರಹ ಅಭಿಯಾನಕ್ಕೆ ಕುಂದಾಪುರದಲ್ಲಿ ಚಾಲನೆ ನೀಡಲಾಯಿತು. ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಕೋಟೇಶ್ವರದ ಮಾರ್ಕೊಡು ಸುಧೀರ್ ಕುಮಾರ್ ಶೆಟ್ಟಿ ಯವರ ಅಪಾರ್ಟ್ಮೆಂಟಿನ ಮುಂಭಾಗದಲ್ಲಿ ಸ್ಪ್ರೇ ಸಿಂಪಡಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Click Here

ಈ ಸಂದರ್ಭ ಮಾತನಾಡಿದ ಕುಂದಾಪುರ ಬಿಜೆಪಿ ಅಧ್ಯಕ್ಷ ಶಂಕರ ಅಂಕದಕಟ್ಟೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೀಡಿದ ಕರೆಯಂತೆ ಮೂರನೇ ಅವಧಿಗೆ ನರೇಂದ್ರ ಮೋದಿಯನ್ನೇ ಪ್ರದಾನಿ ಮಾಡುವುದು ಬಿಜೆಪಿಯ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ಗೋಡೆಬರಹದ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಕುಂದಾಪುರ ವಿಧಾನಸಭಾ ಕ್ಷೇತ್ರದ ಪ್ರತೀ ಬೂತು ಮಟ್ಟದಲ್ಲಿಯೂ ಅಭಿಯಾನವನ್ನು ಯಶಸ್ವಿಗೊಳಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭ ಪಕ್ಷದ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಗೋಪಾಡಿ, ಸತೀಶ್ ಪೂಜಾರಿ, ಮತ್ತೊಮ್ಮೆ ಮೋದಿ ಗೋಡೆ ಬರಹದ ಜಿಲ್ಲಾ ಸಹ ಸಂಚಾಲಕ ರಾಜೇಶ್ ಕಾವೇರಿ, ಕುಂದಾಪುರ ಮಂಡಲದ ಸಂಚಾಲಕ ಸುಧೀರ್ ಕೆ.ಎಸ್, ಸಹ ಸಂಚಾಲಕ ಸುರೇಂದ್ರ ಕಾಂಚನ್ ಸಂಗಮ್, ಮಹಿಳಾ ಮೋರ್ಛಾದ ಅಧ್ಯಕ್ಷೆ ರೂಪ ಬಾಬು ಪೈ, ಮಂಡಲದ ಉಪಾಧ್ಯಕ್ಷ ರಾಜೇಶ್ ಉಡುಪ, ಕೋಟೇಶ್ವರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಗಿಣಿ ದೇವಾಡಿಗ, ಕೋಟೇಶ್ವರ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಕೃಷ್ಣ ಗೊಲ್ಲ, ಪ್ರಧಾನ ಕಾರ್ಯದರ್ಶಿ ನಾಗರಾಜ್ ಆಚಾರ್ಯ, ಕೋಟೇಶ್ವರ ಗ್ರಾಮ ಪಂಚಾಯತಿನ ಸದಸ್ಯರು ಹಾಗೂ ಪಕ್ಷದ ವಿವಿಧ ಸ್ಥರದ ಪದಾಧಿಕಾರಿಗಳು, ಮುಖಂಡರು ಹಿತೈಷಿಗಳು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here