ಕೋಟೇಶ್ವರ ಶಕ್ತಿ ಕೇಂದ್ರದಲ್ಲಿ ಮೊದಲ ಯುವ ಚೌಪಾಲ್ ಗೆ ಶಾಸಕ ಕಿರಣ್ ಕೊಡ್ಗಿ ಚಾಲನೆ

0
319

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಬಿಜೆಪಿ ಯುವಮೋರ್ಚಾ ಕುಂದಾಪುರ ಮಂಡಲದ ನೇತೃತ್ವದಲ್ಲಿ ಯುವ ಚೌಪಾಲ್ ಕಾರ್ಯಕ್ರಮದ ಉದ್ಘಾಟನೆಯು ಕೋಟೇಶ್ವರ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ನಡೆಯಿತು.

ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಿ, ಯುವ ಚೌಪಾಲ್ ಕಾರ್ಯಕ್ರಮವು ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ನಡೆಯಲಿದ್ದು ಪ್ರತಿ ಯುವಕರು ಭಾಗಿಯಾಗಿ ಕೇಂದ್ರ ಸರ್ಕಾರದ ಯೋಜನೆಯ ಸಂಪೂರ್ಣ ಮಾಹಿತಿ ಪಡೆದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸೂಚಿಸಿದರು.

Click Here

ಪ್ರಧಾನ ಭಾಷಣಕಾರರಾಗಿ ಆದರ್ಶ ಕೆಲ ಮಾತನಾಡಿ ಯುವ ಸಮೂಹಕ್ಕಾಗಿ ಕೇಂದ್ರ ಸರ್ಕಾರದ ಯೋಜನೆಗಳ ಲಾಭ ಮತ್ತು ಸಮಗ್ರ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ನಿಯೋಜಿತ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ, ಲೋಕಸಭಾ ಚುನಾವಣಾ ಸಂಚಾಲಕ ಸತೀಶ್ ಪೂಜಾರಿ, ಯುವಮೋರ್ಚಾ ಅಧ್ಯಕ್ಷ ಅವಿನಾಶ್ ಉಳ್ತೂರು, ಪ್ರಧಾನ ಕಾರ್ಯದರ್ಶಿ ಸುನೀಲ್ ಖಾರ್ವಿ, ಸಂಪತ್ ಶೇರಿಗಾರ್ ಉಪಸ್ಥಿತರಿದ್ದರು.

ಮಂಡಲ ಕಾರ್ಯದರ್ಶಿ ಸುರೇಂದ್ರ ಕಾಂಚನ್ ಕಾರ್ಯಕ್ರಮ ನಿರೂಪಿಸಿದರು, ಅವಿನಾಶ್ ಉಳ್ತೂರು ಸ್ವಾಗತಿಸಿ, ಸುನೀಲ್ ಖಾರ್ವಿ ಧನ್ಯವಾದ ಅರ್ಪಿಸಿದರು, ಮಹಿಳಾ ಮೋರ್ಚಾ ಅಧ್ಯಕ್ಷೆ ರೂಪಾ ಪೈ ವಂದೇ ಮಾತರಂ ಗೀತೆ ಹಾಡಿದರು.

Click Here

LEAVE A REPLY

Please enter your comment!
Please enter your name here