ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಕುಂದಾಪುರ ಇಲ್ಲಿಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಶುಭಶಂಸನಾ ಕಾರ್ಯಕ್ರಮ ಏರ್ಪಡಿಸಾಗಿತ್ತು.
ಈ ಸಂದರ್ಭದಲ್ಲಿ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯ ಅರೇಬಿಕ್ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿದ ೭ನೆಯ ತರಗತಿಯ ವಿದ್ಯಾರ್ಥಿನಿ ನಿಫಾ ಅಫ್ಶಿನ್ ಅವರಿಗೆ ಸಂಸ್ಥೆಯ ಕಾರ್ಯದರ್ಶಿಗಳಾದ ಕೆ. ರಾಧಾಕೃಷ್ಣ ಶೆಣೈಯವರು ಬೆಳ್ಳಿ ನಾಣ್ಯ ನೀಡಿ ಪುರಸ್ಕರಿಸಿದರು. ಈ ಸಮಾರಂಭದಲ್ಲಿ ಪದವಿಪೂರ್ವ ವಿಭಾಗದ ಪ್ರಾಂಶುಪಾಲೆ ರಾಗಿಣಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಕೃಷ್ಣ ಅಡಿಗ, ಪ್ರಾಥಮಿಕ ಹಾಗೂ ಪೂರ್ವಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿಯರಾದ ರೇಷ್ಮಾ ಡಿಸೋಜಾ, ಶ್ರೀಮತಿ ಪ್ರಮೀಳಾ ಡಿಸೋಜಾರವರು ಉಪಸ್ಥಿತರಿದ್ದರು.











