ಕುಂದಾಪುರ :ಸಾಧನೆಯ ಮೇಲೆ ಚುನಾವಣೆ ಎದುರಿಸುತ್ತೇವೆ – ಸಚಿವ ಮಧು ಬಂಗಾರಪ್ಪ

0
230

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಶೇ91ರಷ್ಟು ಜನರನ್ನು ಗ್ಯಾರೆಂಟಿಗಳ ಮೂಲಕ ತಲುಪಿದೆ ಎನ್ನುವ ಹೆಮ್ಮೆ ಇದೆ. ಈ ಬಾರಿಯ ಚುನಾವಣೆಯಲ್ಲಿ ನಾವು ನಮ್ಮ ಸಾಧನೆಗಳ ಮೂಲಕ ಮತ ಯಾಚಿಸುತ್ತೇವೆ ಎಂದು ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಮಂಗಳವಾರ ಕುಂದಾಪುರದ ಪತ್ರಿಕಾ ಭವನದಲ್ಲಿ ಕರೆಯಲಾದ ಸುದ್ಧಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಸಾಮಾನ್ಯವಾಗಿ ರಾಜಕಾರಣಿಗಳು ಎರಡು ರೀತಿಯಲ್ಲಿ ಚುನಾವಣೆಯನ್ನು ಎದುರಿಸುತ್ತಾರೆ. ಅದರಲ್ಲಿ ಒಂದು ಜಾತಿ ಧರ್ಮಗಳ ಆಧಾರದಲ್ಲಾದರೆ ಇನ್ನೊಂದು ಭಾವನಾತ್ಮಕವಾಗಿ. ಕಾಂಗ್ರೆಸ್ ಯಾವತ್ತೂ ಜಾತಿ ಧರ್ಮಗಳ ಆಧಾರದಲ್ಲಿ ಚುನಾವಣೆ ಎದುರಿಸಿಲ್ಲ. ಬದಲಾಗಿ ಜನರ ಭಾವನೆಗಳನ್ನು ಅರಿತುಕೊಂಡು ಅವರ ಹೊಟ್ಟೆ ಹಸಿವನ್ನು ನೀಗಿಸುವಲ್ಲಿ ಪ್ರಯತ್ನಿಸುತ್ತದೆ. ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ನೀಡಿದ್ದ ಐದೂ ಗ್ಯಾರೆಂಟಿಗಳನ್ನೂ ಪೂರೈಸುವ ಮೂಲಕ ರಾಜಕಾರಣದಲ್ಲಿ ಜನರ ನಂಬಿಕೆ ಮತ್ತು ವಿಶ್ವಾಸವನ್ನು ಉಳಿಸಿಕೊಂಡಿದೆ ಎಂದರು.

Click Here

ದೇಶದಾದ್ಯಂತ ರಾಜಕೀಯ ಬದಲಾವಣೆಗಳನ್ನು ಜನ ಬಯಸುತ್ತಿದ್ದಾರೆ ಎಂದ ಅವರು, ಉಡುಪಿಯಲ್ಲಿ ಎರಡೆರಡು ಬಾರಿ ಸಂಸದೆಯಾದ ಶೋಭಾ ಕರಂದ್ಲಾಜೆ ಅಲ್ಲಿನ ಜನ ಗೋ ಬ್ಯಾಕ್ ಎನ್ನುವ ಮೂಲಕ ಸಂಸದೆಯ ಸಾಧನೆಯನ್ನು ಎತ್ತಿ ಹಿಡಿದ್ದಾರೆ ಎಂದ ಅವರು, ಶಿವಮೊಗ್ಗ ಸಂಸದ ರಾಘವೆಂದ್ರ ಸಾಧನೆ ಶೂನ್ಯ ಎಂದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಅನಾಯಾಸವಾಗಿ ಗೆಲ್ಲಲಿದೆ ಎಂದರು. ಈ ಹಿಂದೆ ಜೆಡಿಎಸ್ ನಲ್ಲಿದ್ದ ನಾನು ಕಾಂಗ್ರೆಸ್ ಸೇರಿರುವ ಬಗ್ಗೆ ಹೆಮ್ಮೆ ಇದೆ ಎಂದವರು, ಒಂದು ವೇಳೆ ನಾನು ಜೆಡಿಎಸ್ ನಲ್ಲಿದ್ದಿದ್ದರೆ ಇವತ್ತು ಕೋಮುವಾದಿ ಶಕ್ತಿಯಾಗಿರುವ ಬಿಜೆಪಿ ಜೊತೆ ಕೈ ಜೋಡಿಸುವ ದುರಂತ ಸಂಭವಿಸುತ್ತಿತ್ತು. ಆದರೆ ಹಾಗಾಗಲಿಲ್ಲ ಎಂದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನನ್ನ ಸಹೋದರಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ನಿಂದ ಸ್ಪರ್ಧಿಸುತ್ತಿದ್ದು, ರಾಜ್ಯ ಸರ್ಕಾರದ ಗ್ಯಾರೆಂಟಿ ಸಾಧನೆಗಳು ಮತ್ತು ಮಾಜೀ ಮುಖ್ಯಮಂತ್ರಿ ಬಂಗಾರಪ್ಪನವರ ಜನಪರ ಕಾರ್ಯಗಳು ಕಾಂಗ್ರೆಸ್ ಪಕ್ಷದ ಕೈಹಿಡಿಯಲಿದೆ ಎಂದರು.

ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜೀ ಶಾಸಕ ಕೆ. ಗೋಪಾಲ ಪೂಜಾರಿ, ಮಾಜೀ ಶಾಸಕ ಸುಕುಮಾರ್ ಶೆಟ್ಟಿ, ವಿವಿಧ ಬ್ಲಾಕ್ ಗಳ ಅಧ್ಯಕ್ಷರಾದ ಅರವಿಂದ ಪೂಜಾರಿ, ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು, ಜಿ.ಎ.ಬಾವಾ, ರಾಜು ಪೂಜಾರಿ, ಅಶೋಕ್ ಪೂಜಾರಿ ಬೀಜಾಡಿ ಮೊದಲಾದವರು ಇದ್ದರು. ಇದೇ ಸಂದರ್ಭ ಪ್ರಕರ್ತರ ಸಂಘದ ವತಿಯಿಂದ ಕುಂದಾಪುರದಲ್ಲಿ ಸುಸಜ್ಜಿತ ಪ್ರೆಸ್ ಕ್ಲಬ್ ನಿರ್ಮಾಣಕ್ಕೆ ಸರ್ಕಾರದ ಮನಸ್ಸು ಮಾಡಬೇಕು ಎಂಬುದಾಗಿ ಮನವಿ ನೀಡಲಾಯಿತು.

Click Here

LEAVE A REPLY

Please enter your comment!
Please enter your name here