ಕುಂದಾಪುರ :ಶ್ರೀ ನಂದಿಕೇಶ್ವರ ದೇವಸ್ಥಾನದ ಪುನರ್‌ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ

0
579

Click Here

Click Here

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ನಗರದ ಮುಖ್ಯ ರಸ್ತೆಯ ಸರಕಾರಿ ಆಸ್ಪತ್ರೆಯ ಆವರಣದಲ್ಲಿರುವ ಶ್ರೀ ನಂದಿಕೇಶ್ವರ ದೇವಸ್ಥಾನದ ಪುನರ್‌ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭವು  ಆದಿತ್ಯವಾರ ಬೆಳಿಗ್ಗೆ 10.30 ಕ್ಕೆ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಜರುಗಲಿರುವುದು.

ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭದ ಅಧ್ಯಕ್ಷತೆಯನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಡಾ.ನಾಗೇಶ್‌ ರವರು ವಹಿಸಿಕೊಳ್ಳಲಿದ್ದಾರೆ.

Click Here

ಆಮಂತ್ರಣ ಪತ್ರಿಕೆಯನ್ನು ಕುಂದಾಪುರ ರೆಡ್‌ ಕ್ರಾಸ್‌ ಸೊಸೈಟಿಯ ಸಭಾಪತಿಗಳಾದ ಎಸ್‌ ಜಯಕರ ಶೆಟ್ಟಿ ಅವರು ಬಿಡುಗಡೆ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಫ್ರೆಂಡ್ಸ್ ಕ್ಲಬ್‌ ಅಧ್ಯಕ್ಷರಾದ ನಾಗರಾಜ್ ಖಾರ್ವಿ, ಮೈಲಾರೇಶ್ವರ ಯುವಕ ಮಂಡಲದ ಅಧ್ಯಕ್ಷರಾದ ಜಿ ಆರ್ ಪ್ರಕಾಶ್, ಹೂವಿನ ವ್ಯಾಪಾರಿ ಸಂಘಗಳ ಅಧ್ಯಕ್ಷರಾದ ಸತೀಶ್ ಕುಮಾರ್ ಕುಂದಾಪುರ ನಂದಿ ಫ್ರೆಂಡ್ಸ್ ಅಧ್ಯಕ್ಷರಾದ ಶಿವಪ್ರಸಾದ್ ಅವರು ಆಗಮಿಸಲಿದ್ದು ಶುಭಾಸಂಶನೆಯನ್ನು ವಿದ್ಯುತ್ ಗುತ್ತಿಗೆದಾರರಾದ ಶ್ರೀಯುತ ಕೆ ಆರ್ ನಾಯ್ಕ್ ರವರು ಮಾಡಲಿದ್ದಾರೆಂದು ಜೀರ್ಣೋಧ್ಧಾರ ಸಮಿತಿಯ ಅಧ್ಯಕ್ಷರಾದ ಯು ರಾಧಾಕೃಷ್ಣ ರವರು ತಿಳಿಸಿದ್ದಾರೆ.

Click Here

LEAVE A REPLY

Please enter your comment!
Please enter your name here