ಕುಂದಾಪುರ :ಬಿಜೆಪಿ ಯುವ ಪದಾಧಿಕಾರಿಗಳಿಂದ ಹಾಲಾಡಿ ಭೇಟಿ

0
595

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕುಂದಾಪುರದಲ್ಲಿ ಚುನಾವಣಾ ತಂತ್ರಗಾರಿಕೆ ಗರಿಗೆದರಿದೆ. ಹಾಲಾಡಿ ಮನೆಗೆ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿಯ ಬಳಿಕ ವಿಚಲಿತರಾದ ಬಿಜೆಪಿ, ಮಂಗಳವಾರ ಮತ್ತೆ ಯುವ ನಾಯಕರ ಜೊತೆಗೆ ಹಾಲಾಡಿ ಭೇಟಿ ಮಾಡಿ ರಾಜಕೀಯ ತಂತ್ರಗಾರಿಕೆ ಬಗ್ಗೆ ಚರ್ಚೆ ನಡೆಸಿದೆ.

Click Here

ಕುಂದಾಪುರ ಮಂಡಲ ಬಿಜೆಪಿ ಅಧ್ಯಕ್ಷ ಬೀಜಾಡಿ ಸುರೇಶ್ ಶೆಟ್ಟಿ ಹಾಗೂ ಜಿಲ್ಲಾ ಯುವ ಬಿಜೆಪಿ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ನೇತೃತ್ವದಲ್ಲಿ ಮಾಜೀ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿ ಮಾಡಿ ಲೋಕಸಭಾ ಚುನಾವಣೆಯ ಕಾರ್ಯತಂತ್ರಗಳ ಬಗ್ಗೆ, ಸಲಹೆ ಸೂಚನೆ ಮಾರ್ಗದರ್ಶನವನ್ನು ಪಡೆಯಲಾಯಿತು.

ಈ ಸಂದರ್ಭ ಕುಂದಾಪುರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್.ಕೆ.ಎಸ್, ಕುಂದಾಪುರ, ನಿಕಟಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಪಕ್ಷದ ಮುಖಂಡರಾದ, ಸಂಪತ್ ಶೆಟ್ಟಿ ಶಾನಾಡಿ, ಪ್ರವೀಣ್ ಶೆಟ್ಟಿ ವಂಡಾರು ಹಾಗೂ ವಿವಿಧ ಮೋರ್ಚಗಳ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here