ಕೋಟೇಶ್ವರ :ಚುನಾವಣೆ ದೇಶ ಮತ್ತು ಧರ್ಮದ ಒಗ್ಗೂಡುವಿಕೆಗೆ ನಡೆಯುವ ಚುನಾವಣೆ :ಕೋಟ ಶ್ರೀನಿವಾಸ್ ಪೂಜಾರಿ

0
294

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ನಿಮ್ಮ ಪ್ರತಿಯೊಂದು ಮತಗಳು ದೇಶದ ಒಗ್ಗೂಡುವಿಕೆ ಮತ್ತು ರಾಷ್ಟ್ರ ರಕ್ಷಣೆಯ ದೃಷ್ಟಿಯಲ್ಲಿ ಚಲಾಯಿಸಬೇಕಾಗಿದೆ ಆ ನಿಟ್ಟಿನಲ್ಲಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ಮೂಲಕ ಭಾರತೀಯ ಜನತಾ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕಾಗಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು

ಭಾರತೀಯ ಜನತಾ ಪಾರ್ಟಿಯ ಕೋಟೇಶ್ವರ ಮಹಾಶಕ್ತಿ ವ್ಯಾಪ್ತಿಯ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು ಸಶಕ್ತ ಸೇನೆ ದೇಶದ ಆರ್ಥಿಕ ಸುವ್ಯವಸ್ಥೆ ಇದೆಲ್ಲವೂ ನರೇಂದ್ರ ಮೋದಿ ಅವರ ಕೊಡುಗೆ ದೇಶ ಮೊದಲು ಎನ್ನುವ ಸಿದ್ಧಾಂತದೊಂದಿಗೆ ರಾಷ್ಟ್ರಭಕ್ತರು ಮತ್ತು ರಾಷ್ಟ್ರಧ್ರೋಹಿಗಳ ನಡುವಿನ ಚುನಾವಣೆ ಇದಾಗಿದೆ ಎಂದರು

ರಾಮ ಕೇವಲ ಕಾಲ್ಪನಿಕ ಎಂದು ಸುಪ್ರೀಂ ಕೋರ್ಟಿಗೆ ಅಪಿದವಿತ್ ಕೊಟ್ಟ ಕಾಂಗ್ರೆಸ್ ಪಕ್ಷದ ಆಡಳಿತವನ್ನು ದೇಶದಲ್ಲಿ ಮತ್ತೊಮ್ಮೆ ನಾವು ನೋಡುವಂತಾಗಬಾರದು ಎನ್ನುವುದಾದರೆ ಜೈ ಶ್ರೀ ರಾಮ್ ಘೋಷಣೆಯೊಂದಿಗೆ ರಾಷ್ಟ್ರ ರಕ್ಷಣೆಗಾಗಿ ನಾವು ಮತ ಚಲಾಯಿಸಬೇಕಾಗಿದೆ ಎಂದರು.

Click Here

ಇತ್ತೀಚೆಗೆ ಬಿಜೆಪಿಯ ಕಾರ್ಯಕರ್ತರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ಬೆದರಿಕೆ ಹಾಕುತ್ತಿರುವುದನ್ನು ಖಂಡಿಸಿದ ಕೋಟ ಶ್ರೀನಿವಾಸ್ ಪೂಜಾರಿ ನಮ್ಮ ಕಾರ್ಯಕರ್ತರು ತಂಟೆಗೆ ಬಂದರೆ ಬೀದಿಗಿಳಿದು ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ಇದೇ ಸಂದರ್ಭ ಮಾತನಾಡಿದ ಬಿಜೆಪಿ ಪ್ರಚಾರ ಸಮಿತಿಯ ಅಧ್ಯಕ್ಷ ಪ್ರಮೋದ್ ಮಧ್ವರಾಜ್, ಕಾಂಗ್ರೆಸ್ ಪಕ್ಷಕ್ಕೆ ಪ್ರಧಾನಿ ಅಭ್ಯರ್ಥಿಯೇ ಇಲ್ಲ. ಮೊದಲು ಪ್ರಧಾನಮಂತ್ರಿ ಅಭ್ಯರ್ಥಿ ಯಾರೆಂದು ಸ್ಪಷ್ಟಪಡಿಸಲಿ ಆಮೇಲೆ ಚುನಾವಣೆ ಎದುರಿಸಲಿ ಯಜಮಾನವಿಲ್ಲದ ಕಾಂಗ್ರೆಸ್ ಪಕ್ಷದ ಆಡಳಿತ ಈ ದೇಶಕ್ಕೆ ಅಗತ್ಯವಿಲ್ಲ ಎಂದರು.

ನಮ್ಮ ದೇಶದಲ್ಲಿ ಮುಂದಿನ ಐದು ವರ್ಷಗಳ ಅವಧಿಗೆ ದೇಶದ ಸುಭದ್ರತೆಗಾಗಿ ಮೋದಿಯೇ ನಮ್ಮ ಅಭ್ಯರ್ಥಿ ಎಂದು ಭಾವಿಸಿ ಮೋದಿಯ ಆಯ್ಕೆಗಾಗಿ ನಾವು ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಬೇಕಾಗಿದೆ ಎಂದರು

ಕುಂದಾಪುರದ ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ಜಿಲ್ಲಾ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ಮಂಡಲದ ನಿಕತಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆ, ಮಂಡಲದ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ, ಸುಧೀರ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕೃಷ್ಣ ಗೊಲ್ಲ, ಬಸ್ರೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನಕರ ಶೆಟ್ಟಿ, ಕೋಟೇಶ್ವರ ಪಂಚಾಯತ್ ಅಧ್ಯಕ್ಷ ರಾಗಿಣಿ ದೇವಾಡಿಗ, ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here