ಕುಂದಾಪುರ ಮಿರರ್ ಸುದ್ದಿ…
ಕೋಟ: ರಾಷ್ಟ್ರೀಯ ಮೆರಿಟ್ ಸ್ಕಾಲರ್ ಶಿಪ್ (ಎನ್ಎಂಎಂಎಸ್) 2023-24ನೇ ಸಾಲಿನ ಪರೀಕ್ಷೆಯಲ್ಲಿ ಬ್ರಹ್ಮಾವರ ತಾಲೂಕಿನ ಮಣೂರು-ಪಡುಕರೆಯ ಸರಕಾರಿ ಸಂಯುಕ್ತ ಪ್ರೌಢಶಾಲೆಯ 8ನೇ ತರಗತಿಯ ಆಂಗ್ಲ ಮಾಧ್ಯಮದ 4 ವಿದ್ಯಾರ್ಥಿಗಳು ಉತ್ತೀರ್ಣರಾಗುವುದರ ಮೂಲಕ ಮಾಸಿಕ 1000 ರೂ. ವಿದ್ಯಾರ್ಥಿ ವೇತನ ಪಡೆಯಲು ಅರ್ಹತೆ ಪಡೆದಿದ್ದಾರೆ. ವಿದ್ಯಾರ್ಥಿ ಹರ್ಷಿತ್.ಆರ್ ಶೆಟ್ಟಿ(ಜಿಲ್ಲೆಗೆ ತೃತೀಯ ಸ್ಥಾನ) 118 ಅಂಕ ಗಳಿಸುವುದರ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಎಲ್ಲಾ ವಿದ್ಯಾರ್ಥಿಗಳಿಗೂ ಗೀತಾನಂದ ಪೌಂಡೇಶನ್ ಪ್ರವರ್ತಕರಾದ ಆನಂದ ಸಿ ಕುಂದರ್. ಹಾಗೂ ಶಾಲಾಭಿವೃದ್ಧಿ ಅಧ್ಯಕ್ಷರು -ಸದಸ್ಯರು ಮುಖ್ಯೋಪಾಧ್ಯಾಯರು. ಅಧ್ಯಾಪಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.












