ಕೋಟ :ಪರಿಸರ ಜಾಗೃತಿ ಸಂಘಟನೆಗೆ ಮಾತ್ರವಲ್ಲ ಜನಸಾಮಾನ್ಯರಲ್ಲಿ ಬರಬೇಕು – ಗೋಪಾಲ್ ಪೂಜಾರಿ

0
308

Click Here

Click Here

ವಿಶ್ವ ಪ್ಲಾಸ್ಟಿಕ್ ಮುಕ್ತ ದಿನ ವಿಶೇಷ, ಕೊಮೆ ಬೀಚ್ ಕ್ಲಿನಿಂಗ್

ಕುಂದಾಪುರ ಮಿರರ್ ಸುದ್ದಿ…
ಕೋಟ: ಪರಿಸರದ ಜಾಗೃತಿ ಸಂಘಟನೆಗಳಿಗೆ ಮಾತ್ರವಲ್ಲದೆ ಜನಸಾಮಾನ್ಯರಲ್ಲಿ ಮೂಡಬೇಕು ಎಂದು ಕೊಮೆ ಕೊರವಡಿ ವಿವಿದೋದ್ದೇಶ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲ್ ಪೂಜಾರಿ ಹೇಳಿದರು.

ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ,ಗೀತಾನಂದ ಫೌಂಡೇಶನ್ ಮಣೂರು ಇವರುಗಳ ಸಹಯೋಗದೊಂದಿಗೆ ತೆಕ್ಕಟ್ಟೆ ಗ್ರಾ.ಪಂ ಎಸ್ ಎಲ್ ಆರ್ ಎಂ ಘಟಕ ಇದರ ಸಂಯೋಜನೆಯೊಂದಿಗೆ 209ನೇ ಭಾನುವಾರ ಹಾಗೂ ವಿಶ್ವ ಪ್ಲಾಸ್ಟಿಕ್ ಮುಕ್ತ ದಿನದ ಅಂಗವಾಗಿ ಕೊಮೆ ಬೀಚ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ ಪರಿಸರದ ಬಗ್ಗೆ ಕೀಳರಿಮೆ ಬಿಡಿ ಅದರ ಬಗ್ಗೆ ಹೆಚ್ಚಿನ ಜಾಗೃತಿ ಅಗತ್ಯ. ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಎಲ್ಲಂದರಲ್ಲಿ ಎಸೆಯಬೇಡಿ ಹೊಳೆ ತೊರೆ, ಸಮುದ್ರಕ್ಕೆ ಸೇರುವ ಪ್ಲಾಸ್ಟಿಕ್ ಜೀವ ಸಂಕುಲಗಳಿಗೆ ಸಂಕಷ್ಟ ತಂದೊಡ್ಡುತ್ತಿದೆ ಸಮುದ್ರದ ಕಿನಾರೆಯಲ್ಲಿ ತ್ಯಾಜ್ಯದ ರಾಶಿ ನೋಡಲಾಸಾಧ್ಯವಾಗಿದೆ. ಈ ಬಗ್ಗೆ ಈಗಾಲೇ ಜಾಗೃತರಾಗುವುದು ಒಳಿತು ಪಂಚವರ್ಣದ ಪರಿಸರ ಕಾಳಜಿ ಇಡೀ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಕಾರ್ಯವೈರಿಯ ಬಗ್ಗೆ ಅಭಿನಂದಿಸಿದರು.

Click Here

ಕೋಟ ಪಂಚವರ್ಣದ ಅಧ್ಯಕ್ಷ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಪ್ರಧಾನಕಾರ್ಯದರ್ಶಿ ವಸಂತಿ ಹಂದಟ್ಟು, ತೆಕ್ಕಟ್ಟೆ ಗ್ರಾ.ಪಂ ಎಸ್ ಎಲ್ ಆರ್ ಎಂ ಘಟಕದ ಮುಖ್ಯಸ್ಥೆ ರೇವತಿ ತೆಕ್ಕಟ್ಟೆ, ಹಂದಟ್ಟು ಮಹಿಳಾ ಬಳಗದ ಸುಜಾತ , ಮಣೂರು ಫ್ರೆಂಡ್ಸ್ ನ ದಿನೇಶ್ ಆಚಾರ್ ,ಪಂಚವರ್ಣ ಯುವಕ ಮಂಡಲದ ಸಂಚಾಲಕ ಅಮೃತ್ ಜೋಗಿ ಇದ್ದರು.

ಕಾರ್ಯಕ್ರಮವನ್ನು ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸಂಯೋಜಿಸಿದರು.

Click Here

LEAVE A REPLY

Please enter your comment!
Please enter your name here