ಕುಂದಾಪುರ ಬಿಜೆಪಿ ಯುವಮೋರ್ಚಾ ವತಿಯಿಂದ 280 ಫಲಾನುಭವಿಗಳಿಗೆ ಕನ್ನಡಕ ವಿತರಣೆ

0
426

Click Here

Click Here

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ:
ಸೇವೆ ಮತ್ತು ಸಮರ್ಪಣೆ ಅಭಿಯಾನದ ಅಡಿಯಲ್ಲಿ ಬಿಜೆಪಿ ಯುವಮೋರ್ಚಾ ಕುಂದಾಪುರ ಆಯೋಜಿಸಿದ್ದ ನೇತ್ರ ಚಿಕಿತ್ಸಾ ಶಿಭಿರದಲ್ಲಿ ಕನ್ನಡಕ ಅವಶ್ಯಕತೆಯಿರುವ ಫಲಾನುಭವಿಗಳಿಗೆ ಮಂಗಳವಾರದಂದು ಬಿದ್ಕಲ್ ಕಟ್ಟೆಯ ನಾಗಲಕ್ಷ್ಮೀ ಸಭಾಭವನದಲ್ಲಿ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ ನಡೆಯಿತು.


280 ಫಲಾನುಭವಿಗಳಿಗೆ ಕನ್ನಡಕ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಯುವಮೋರ್ಚಾ ಅಧ್ಯಕ್ಷರಾದ ಅವಿನಾಶ್ ಉಳ್ತೂರು ವಹಿಸಿದ್ದರು.

Click Here

ಕುಂದಾಪುರ ಮಂಡಲ ಅಧ್ಯಕ್ಷರಾದ ಶಂಕರ ಅಂಕದಕಟ್ಟೆ , ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಮಂಡಳಿಯ ಉಪಾಧ್ಯಕ್ಷ ರಾದ ಕಿರಣ್ ಕುಮಾರ್ ಕೊಡ್ಗಿ, ಮಂಡಲ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಗೋಪಾಡಿ, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಯುವಮೋರ್ಚಾ ಮಂಡಲ ಪ್ರಧಾನ ಕಾರ್ಯದರ್ಶಿ ಗಳಾದ ಚೇತನ್ ಬಂಗೇರ, ಸುನೀಲ್ ಖಾರ್ವಿ, ಉಪಾಧ್ಯಕ್ಷ ಅಭಿಷೇಕ ಅಂಕದಕಟ್ಟೆ, ಹಾಲಾಡಿ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಶಂಕರ್ ಮೊಗವೀರ, ಯುವಮೋರ್ಚಾ ಹಾಲಾಡಿ ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಹರ್ಷ ಪೂಜಾರಿ, ಪ್ರಸಾದ್ ನೇತ್ರಾಲಯದ ಕನ್ನಡಕ ವಿಭಾಗದ ಡಾ.ಹರೀಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಅಗಲಿದ ಯುವನಟ ಪುನೀತ್ ರಾಜ್ ಕುಮಾರ್ ಮತ್ತು ಯುವಮೋರ್ಚಾ ಕಾರ್ಯದರ್ಶಿ ದೀಕ್ಷಿತ್ ಶೆಟ್ಟಿ ಕೇಸನಮಕ್ಕಿ ಅವರ ತಂದೆ ಭಾಸ್ಕರ್ ಶೆಟ್ಟಿ ಯವರಿಗೆ ಮೌನ ಪ್ರಾರ್ಥನೆ ಯೊಂದಿಗೆ ಶೃದ್ಧಾಂಜಲಿ ಅರ್ಪಿಸಲಾಯಿತು.

ಮಹಿಳಾ ಮೋರ್ಚಾ ಕುಂದಾಪುರ ಅಧ್ಯಕ್ಷೆ ರೂಪಾ ಪೈ ವಂದೇ ಮಾತರಂ ಗೀತೆ ಹಾಡಿದರು, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸುನಿಲ್ ಖಾರ್ವಿ ಸ್ವಾಗತಿಸಿ, ಚೇತನ್ ನಿರೂಪಿಸಿದರು.

Click Here

LEAVE A REPLY

Please enter your comment!
Please enter your name here