ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ನಬಾರ್ಡ್ ಅಧಿಕಾರಿಗಳೊಂದಿಗೆ ಸಹಕಾರ ಇಲಾಖೆ ಮತ್ತು ಅಧಿಕಾರಿಗಳ ಭೇಟಿ

0
217

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ: ಕೋಟ ಸಹಕಾರಿ ವ್ಯವಸಾಯಕ ಸಂಘದ ಮುಖ್ಯಕಛೇರಿಗೆ ನಬಾರ್ಡ್ನ ಉಪ ಮಹಾಪ್ರಬಂಧಕರಾದ ಯೋಗೀಶ ಇವರ ನೇತೃತ್ವದಲ್ಲಿ ಒಡಿಸ್ಸಾ ರಾಜ್ಯದ ಭುವನೇಶ್ವರದ ಸಹಕಾರ ಇಲಾಖೆ ಮತ್ತು ಆರ್‌ಸಿಎಸ್ ಅಧಿಕಾರಿಗಳು ಇತ್ತೀಚಿಗೆ ಭೇಟಿ ನೀಡಿದರು.

ಈ ಸಂದರ್ಭ ಭೇಟಿ ನೀಡಿದ ಅಧಿಕಾರಿಗಳನ್ನು ಕೋಟ ಸಂಘದ ಅಧ್ಯಕ್ಷರಾದ ಡಾ. ಕೃಷ್ಣ ಕಾಂಚನ್ ಸ್ವಾಗತಿಸಿ, ಸಂಘದ ವ್ಯವಹಾರ ಅಭಿವೃದ್ಧಿ, ಸದಸ್ಯರಿಗೆ ನೀಡಲಾಗುತ್ತಿರುವ ಸೇವೆಗಳು ಮತ್ತು ಸವಲತ್ತುಗಳ ಬಗ್ಗೆ ಅವರಿಗೆ ಮಾಹಿತಿ ನೀಡಿದರು.

Click Here

ನಬಾರ್ಡ್ನ ಅಧಿಕಾರಿಗಳು ಸಂಘದ ಆರ್ಥಿಕ ಅಭಿವೃದ್ಧಿ, ಸಾಲ ನೀಡುವಿಕೆ ಮತ್ತು ವಸೂಲಾತಿ, ಸ್ವಸಹಾಯ ಸಂಘಗಳ ಕಾರ್ಯಚಟುವಟಿಕೆ ಮತ್ತು ಸಂಘದ ಯೋಜನೆಗಳ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಚರ್ಚೆಯ ಮೂಲಕ ವಿಚಾರ ವಿನಿಮಯ ಮಾಡಿಕೊಂಡರು. ಸಂಘದ ವ್ಯವಸ್ಥಿತ ಕಾರ್ಯವೈಖರಿ, ಸೇವಾ ಮನೋಭಾವ ಹಾಗೂ ಕಾರ್ಯತತ್ಪರತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಸಂಘದ ಸರ್ವತೋಮುಖ ಅಭಿವೃದ್ಧಿ ಮತ್ತು ಜನಪರ ಕಾರ್ಯಗಳನ್ನು ಶ್ಲಾಘಿಸಿದರು. ಬಂಡವಾಳವನ್ನು ಸಾಲ ನೀಡುವಿಕೆಯೊಂದಿಗೆ ಸಾರ್ವಜನಿಕರಿಗೆ ಸಹಕಾರಿಯಾಗುವಂತಹ ಇತರ ವ್ಯವಹಾರಗಳಲ್ಲಿ ತೊಡಗಿಸಿ ಅಭಿವೃದ್ಧಿ ಹೊಂದುವಂತೆ ಹಾಗೂ ಸಂಘದ ಎಲ್ಲಾ ಶಾಖೆಗಳಿಗೆ ಸ್ವಂತ ನಿವೇಶನ ಖರೀದಿಸುವಂತೆ ಅವರು ಸಲಹೆ ನೀಡಿದರು. ಸಂಘದ ನೂತನ ವಿಶಿಷ್ಟ ಯೋಜನೆಗಳಲ್ಲಿ ಒಂದಾದ ‘ಸಕಲ’ ಕೃಷಿ ಉಪಕರಣಗಳ ಮಾರಾಟ ಮಳಿಗೆಗೆ ಅವರು ಭೇಟಿ ನೀಡಿದರು.

ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ ಕುಮಾರ್ ಶೆಟ್ಟಿ ಇವರು ಭೇಟಿ ನೀಡಿದ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದರು.

Click Here

LEAVE A REPLY

Please enter your comment!
Please enter your name here