ಮಣೂರು – ರಾಷ್ಟ್ರೀಯ ಹೆದ್ದಾರಿಯಲ್ಲೆ ಬಾರಿ ಗಾತ್ರದ ತ್ಯಾಜ್ಯದ ಮೂಟೆ, ಸಾರ್ವಜನಿಕರ ಆಕ್ರೋಶ

0
209

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಇಲ್ಲಿನ ಕೋಟದ ಮಣೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಧ್ಯದಲ್ಲೆ ಕಿಡಿಗೆಡಿಗಳು ಮೂಟೆಗಟ್ಟಲೆ ತ್ಯಾಜ್ಯ ಎಸೆದ ಘಟನೆ ಕಳೆದ ಎರಡು ದಿನಗಳಿಂದ ನಡೆದಿದೆ.

Click Here

ಸೋಮವಾರ ರಾತ್ರಿ ಬೆಳಗಾಗುವದರೊಳಗೆ ಒಂದು ಬಾರಿ ಗಾತ್ರದ ತ್ಯಾಜ್ಯದ ಚೀಲ ಕಾಣಿಸಿಕೊಂಡಿತ್ತು ಅದಾದ ನಂತರ ಮಂಗಳವಾರ ಮುಂಜಾನೆಯೊಳಗೆ ಮತ್ತೆ ಮೂರು ಬಾರಿ ಗಾತ್ರದ ತ್ಯಾಜ್ಯದ ಚೀಲ ಅದೇ ಡಿವೈಡರ್ ಮಧ್ಯದಲ್ಲಿ ಕಾಣಿಸಿಕೊಂಡಿದೆ. ಈ ಬಗ್ಗೆ ಸ್ಥಳೀಯರು ಭಯಭೀತರಾಗಿದ್ದು ದಿನದಿಂದ ದಿನಕ್ಕೆ ಏರುತ್ತಿರುವ ತ್ಯಾಜ್ಯದ ಚೀಲದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಾರಿ ಸದ್ದು ಮಾಡಿದೆ, ಇದನ್ನು ಗಮನಿಸಿದ ಕೋಟದ ಪಂಚವರ್ಣ ಸಂಘಟನೆ ಅಧ್ಯಕ್ಷ ಮನೋಹರ್ ಪೂಜಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ರಾಷ್ಟ್ರೀಯ ಹೆದ್ದಾರಿ ನಿರ್ವಹಿಸುತ್ತಿರುವ ಕೆ.ಕೆ ಆರ್ ಕಂಪನಿ ಹಾಗೂ ಕೋಟ ಗ್ರಾಮಪಂಚಾಯತ್ ಮಾಹಿತಿ ನೀಡಿದ್ದಾರೆ.

ಸಿಸಿ ಕ್ಯಾಮರ ಅಳವಡಿಸಿ..
ಈ ಕಸದ ಚೀಲ ಹೆದ್ದಾರಿಯ ನಡು ಮಧ್ಯದಲ್ಲಿ ತ್ಯಾಜ್ಯ ಇರಿಸುವ ಕಿಡಿಗೆಡಿಗಳನ್ನು ಕಂಡುಹಿಡಿಯು ಸಿಸಿ ಕ್ಯಾಮರ ಅಳವಡಿಸಲು ಸಂಬಂಧಪಟ್ಟ ಸ್ಥಳೀಯಾಡಳಿತ ಅಥವಾ ಕೆ.ಕೆ ಆರ್ ಕಂಪನಿಗೆ ಸ್ಥಳೀಯರು ಮತ್ತು ಸಂಘಸಂಸ್ಥೆಗಳು ಆಗ್ರಹಿಸಿದ್ದಾರೆ.

Click Here

LEAVE A REPLY

Please enter your comment!
Please enter your name here