ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಇಲ್ಲಿನ ಸಂಚಾರ ಠಾಣಾ ಪೊಲೀಸರು ರಿಕ್ಷಾ ಚಾಲಕ ಮತ್ತು ಮಾಲೀಕರೊಂದಿಗೆ ಸಂಚಾರ ಸಂಪರ್ಕ ಸಭೆ ನಡೆಸಿದರು. ಈ ಸಂದರ್ಭ ಪಾಲಿಸಬೇಕಾದ ಸಂಚಾರ ನಿಯಮಗಳು, ಶಾಲಾ ಮಕ್ಕಳ ರಿಕ್ಷಾಗಳ ಸುರಕ್ಷತೆ ಹಾಗೂ ಅವುಗಳ ಪಾಲನೆಯ ಬಗ್ಗೆ ಸೂಕ್ತ ತಿಳುವಳಿಕೆ ಮತ್ತು ಮಾಹಿತಿ ನೀಡಲಾಯಿತು.
ಈ ಸಂದರ್ಭ ಸಂಚಾರೀ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸಾದ್ ಸಹಾಯಕ ಉಪನಿರಿಕ್ಷಕ ರಾದ ಆನಂದ. ಬಿ, ಕುಂದಾಪುರ ನಗರ ಹಾಗೂ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ರಿಕ್ಷಾ ಚಾಲಕರು ಮಾಲಕರ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು ಭಾಗವಹಿಸಿದ್ದರು.











