ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ತಾಲೂಕು ಸರಕಾರಿ ಆಸ್ಪತ್ರೆಯ ಒಳರೋಗಿಗಳಿಗೆ , ಯುವ ಕಾಂಗ್ರೆಸ್ ಕುಂದಾಪುರ ಪದಾಧಿಕಾರಿಗಳು ಹಣ್ಣು ಹಂಪಲು ವಿತರಿಸಿ , ಲೋಕಸಭೆಯ ವಿರೋಧ ಪಕ್ಷ ನಾಯಕ , ಸಂಸದ ರಾಹುಲ್ ಗಾಂಧಿಯವರ ಹುಟ್ಟು ಹಬ್ಬವನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಕುಂದಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ವಿನೋದ್ ಕ್ರಾಸ್ಟೊ , ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ದೇವಕಿ ಸಣ್ಣಯ್ಯ, ಪುರಸಭಾ ನಾಮನಿರ್ದೇಶನ ಸದಸ್ಯರಾದ ಅಶೋಕ್ ಸುವರ್ಣ, ಶಶಿರಾಜ್ ಪೂಜಾರಿ, ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶೆಟ್ಟಿ ಕಾಳವಾರ, ಕೆಡಿಪಿ ಸದಸ್ಯರಾದ ರಮೇಶ್ ಶೆಟ್ಟಿ ವಕ್ವಾಡಿ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಜೊಸೆಫ್ ರೆಬೆಲ್ಲೊ, ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ರೋಶನ್ ಬರೆಟ್ಟೊ ಹಂಗಳೂರು, ಸೌಮ್ಯ ಮೋಗವೀರ ಕೋಣಿ,ಜೊಯ್ಸ್ಟನ್ ಡಿಸೋಜಾ, ಶಶಿಕಾಂತ್ ವಡೇರಹೋಬಳಿ, ಚಂದ್ರ ಪೂಜಾರಿ ವಡೇರಹೋಬಳಿ , ಯುವ ಕಾಂಗ್ರೆಸ್ ಕುಂದಾಪುರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಇಚ್ಚಿತಾರ್ಥ ಶೆಟ್ಟಿ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಭಿಜಿತ್ ಪೂಜಾರಿ ಹೇರಿಕುದ್ರು ಅವರು ಹಾಗೂ ಮೊದಲಾದವರು ಉಪಸ್ಥಿತರಿದ್ದರು.











