ಕುಂದಾಪುರ ಮಿರರ್ ಸುದ್ದಿ…
ಕಿರಿಮಂಜೇಶ್ವರ: ಜೂನ್25 ರಂದು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ತಂಬಾಕು ಮುಕ್ತ ದಿನಾಚರಣೆಯ ಪ್ರತಿಜ್ಞಾ ವಿಧಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಹಶಿಕ್ಷಕಿ ಆಶಾಲತಾ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ತಂಬಾಕು ಮುಕ್ತ ದಿನಾಚರಣೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಮುಖ್ಯ ಶಿಕ್ಷಕಿಯಾದ ದೀಪಿಕಾ ಆಚಾರ್ಯ ಅವರು ವಿದ್ಯಾರ್ಥಿಗಳಿಗೆ ತಂಬಾಕು ಮುಕ್ತ ದಿನಾಚರಣೆಯ ಉದ್ದೇಶದ ಬಗ್ಗೆ ತಿಳಿ ಹೇಳುತ್ತಾ ವಿದ್ಯಾರ್ಥಿ ಜೀವನದಲ್ಲಿ ಆರೋಗ್ಯಯುತ ಜೀವನವನ್ನು ತಮ್ಮದಾಗಿಸಿಕೊಳ್ಳುವಂತೆ ಹೇಳಿದರು.
ಈ ಕಾರ್ಯಕ್ರಮದಲ್ಲಿ ಬೋಧಕ/ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.











