ಕುಂದಾಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಿಜೆಪಿ ಸುಳ್ಳಿನ ಪ್ರತಿಭಟನೆಗೆ ಕಾಂಗ್ರೆಸ್ ಸತ್ಯ ದರ್ಶನ ಪ್ರತಿಭಟನಾ ಸಪ್ತಾಹ

0
589

Click Here

Click Here

Video :

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ : ಕಳೆದ ಕೆಲವು ದಿನಗಳ ಹಿಂದೆ ಬಿಜೆಪಿ ಪ್ರತಿಭಟನೆ ಮಾಡಿ ಅನೇಕ ಸುಳ್ಳು ವಿಚಾರಗಳನ್ನು ಹೇಳಿದ್ದಾರೆ. ಅಭಿವೃದ್ಧಿ ಕೆಲಸಗಳು ಆಗುದಿಲ್ಲ ಎಂದು ಪ್ರಚಾರ ಮಾಡುತ್ತಿದ್ದಾರೆ. ಕುಂದಾಪುರದಲ್ಲಿ ಪಾರ್ಕಿಂಗ್ ವ್ಯವಸ್ಥೆ, ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಯುಜಿಡಿ ಯೋಜನೆಯಂತಹ ಅನೇಕ ಸಮಸ್ಯೆಗಳು ಜನರನ್ನು ಕಾಡುತ್ತಿರುವಾಗ ಬಿಜೆಪಿಯವರು ಅದನ್ನು ಬಿಟ್ಟು ಯಾವುದೋ ಸುಳ್ಳುಗಳನ್ನು ಹೇಳಿ ಪ್ರತಿಭಟನೆ ಮಾಡುತ್ತಿದ್ದಾರೆ. ಬಿಜೆಪಿಯವರು ಹೇಳಿದ ಸುಳ್ಳಿನ ಸತ್ಯಾಂಶಗಳನ್ನು ಹೇಳಲು ಕಾಂಗ್ರೆಸ್ ಸತ್ಯದರ್ಶನ ಪ್ರತಿಭಟನೆ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ಟೊ ಹೇಳಿದರು.

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕುಂದಾಪುರ ಪುರಸಭೆ ಎದುರು ಬುಧವಾರ 9/11 ಜಾರಿ, 53 57 ಅಕ್ರಮ ಸಕ್ರಮ ಅರ್ಜಿ ತಿರಸ್ಕಾರ, ಪಿಂಚಣಿ ರದ್ದತಿ, ವಿದ್ಯುತ್ ದರ ಏರಿಕೆ ಖಂಡಿಸಿ ಬಿಜೆಪಿ ಸುಳ್ಳಿನ ಪ್ರತಿಭಟನೆಗೆ ಕಾಂಗ್ರೆಸ್ ಸತ್ಯದರ್ಶನ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಎರಡು ಕಂತುಗಳಲ್ಲಿ ಬರುವ ರಾಜೀವ ಗಾಂಧಿ ಅಭಿವೃದ್ಧಿ ನಿಗಮದ ದುಡ್ಡುಗಳಲ್ಲಿ ನಿಯತ್ತಾಗಿ ಪ್ರತಿ ಅವಧಿಯಲ್ಲಿ ಬರುತ್ತಿದೆ. ಆದರೆ ಕೇಂದ್ರ ಸರಕಾರದ ದುಡ್ಡು ಬರುತ್ತಿಲ್ಲ. ಸಿದ್ಧರಾಮಯ್ಯ ಸರಕಾರ ಬಂದ ಬಳಿಕ ಕುಂದಾಪುರ ತಾಲೂಕು ಆಸ್ಪತ್ರೆಗೆ ಎಂಟು ಡಯಾಲಿಸಿಸ್ ಯಂತ್ರಗಳು ಬಂದಿದ್ದು, ಸುಮಾರು 80 ರೋಗಿಗಳಿಗೆ ಉಚಿತವಾಗಿ ಡಯಾಲಿಸಿಸ್ ಚಿಕಿತ್ಸೆ ನೀಡಲಾಗುತ್ತಿದೆ. ಸುಮಾರು 40 ಲಕ್ಷ ರೂ. ಅನುದಾನದಲ್ಲಿ ಲ್ಯಾಬೋರೇಟರಿಯನ್ನು ಆಧುನೀಕರಣ, ಎಸ್‍ಟಿಪಿ ಯೋಜನೆಗೆ 20 ಲಕ್ಷ ಅನುದಾನ ಬಂದಿದೆ ಎಂದು ಅವರು ಹೇಳಿದ ಅವರು, ಚುನಾವಣೆ ಮುಂಚೆ ಗ್ಯಾರಂಟಿಗೆ ವಾರಂಟಿ ಇಲ್ಲ ಎಂದು ಶಾಸಕರು, ಸಂಸದರು ಹೇಳುತ್ತಿದ್ದು, ಕಳೆದ ಎರಡು ವರ್ಷಗಳಲ್ಲಿ 373 ಕೋಟಿ ಅನುದಾನ ಕುಂದಾಪುರ ತಾಲೂಕಿಗೆ ಬಂದಿದೆ ಎಂದರು.

ಆನಗಳ್ಳಿ ಗ್ರಾಮ ಪಂಚಾಯತ್ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ದಿನೇಶ ಹೆಗ್ಡೆ ಮೊಳಹಳ್ಳಿ, 2021ರಲ್ಲಿ ಬಿಜೆಪಿಯವರೇ 9/11 ತಂದ ನೀತಿ. ಇದರಿಂದ ಹಳ್ಳಿಗಳಲ್ಲಿ ಬಹಳಷ್ಟು ಸಮಸ್ಯೆಯಾಗಿದೆ. ಈ ಬಗ್ಗೆ ಪಕ್ಷದ ಹಿರಿಯ ಮುಖಂಡರ ಜೊತೆಗೆ ಚರ್ಚೆ ನಡೆಸಲಾಗಿದ್ದು, ವಾರದೊಳಗೆ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವ ಪ್ರಯತ್ನ ನಡೆಸಲಾಗುವುದು. ಬಿಜೆಪಿಯವರು ಚುನಾವಣೆ ಸಂದರ್ಭ ಐದು ಗ್ಯಾರಂಟಿ ಬಗ್ಗೆ ಲೇವಡಿ ಮಾಡಿದ್ದರು. ಆದರೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರು ಯಶಸ್ವಿಯಾಗಿ ಐದೂ ಗ್ಯಾರಂಟಿಗಳನ್ನು ಜನರಿಗೆ ನೀಡಿದ್ದಾರೆ. ಗ್ಯಾರಂಟಿ ಯಾವುದೇ ಕಾರಣಕ್ಕೂ ನಿಲ್ಲುದಿಲ್ಲ. ಜಿಪಂ., ತಾಪಂ., ಪುರಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಬಿಜೆಪಿಯವರು ಸುಳ್ಳು ಹೇಳಿ ಜನರ ಮನಸ್ಸು ಬದಲಾವಣೆ ಮಾಡಲು ಹೊರಟಿದ್ದಾರೆ. ಬಿಜೆಪಿಯವರಿಗೆ ಹೇಳಿಕೊಳ್ಳಲು ಏನೂ ಇಲ್ಲ. ಸರಕಾರದ ಗ್ಯಾರಂಟಿ ಯೋಜನೆ ಬಗ್ಗೆ ಹೆದರಿಕೆ ಆಗಿದೆ ಎಂದು ಲೇವಡಿ ಮಾಡಿದರು.

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೇವಕಿ ಸಣ್ಣಯ್ಯ, ಜಿಲ್ಲಾ ವಕ್ತಾರ ವಿಕಾಸ್ ಹೆಗ್ಡೆ ಬಸ್ರೂರು, ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಭಿಜಿತ್ ಪೂಜಾರಿ ಹೇರಿಕುದ್ರು, ಕುಂದಾಪುರ ಪುರಸಭೆ ಸದಸ್ಯರಾದ ಚಂದ್ರಶೇಖರ ಖಾರ್ವಿ, ಶ್ರೀಧರ ಶೇರುಗಾರ್, ಅಶ್ಫಕ್ ಕೋಡಿ, ಪ್ರಭಾವತಿ ಶೆಟ್ಟಿ, ಆನಗಳ್ಳಿ ಗ್ರಾಪಂ ಅಧ್ಯಕ್ಷೆ ಸವಿತಾ ಬಿಲ್ಲವ, ಉಪಾಧ್ಯಕ್ಷುದಯ ಪೂಜಾರಿ, ಪ್ರಭಾಕರ ಬಂಗೇರ, ಗೀತಾ ಎಸ್., ಜೋಸೆಫ್ ರೆಬೆಲ್ಲೊ, ಜೋಯ್ಸನ್ ಡಿಸೋಜ, ಸತೀಶ್ ಮೊಗವೀರ, ನಾಮನಿರ್ದೇಶಿತ ಸದಸ್ಯರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here