ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಶ್ರೀ ವಿ.ವಿ.ವಿ.ಮಂಡಳಿ(ರಿ) ಆಡಳಿತ ಮಂಡಳಿಗೆ ಒಳಪಟ್ಟಿರುವ ಜನತಾ ಅನುದಾನಿತ ಪ್ರೌಢಶಾಲೆ ಹೆಮ್ಮಾಡಿಯ ಹೆಮ್ಮೆಯ ಶಿಕ್ಷಣ ಸಂಸ್ಥೆ. ಗ್ರಾಮೀಣ ಭಾಗಗಳಿಂದ ನೂರಾರು ವಿದ್ಯಾರ್ಥಿಗಳು ಈ ಶಿಕ್ಷಣ ಸಂಸ್ಥೆಯಲ್ಲಿ ದಾಖಲಾತಿ ಪಡೆದುಕೊಂಡು ಶಿಕ್ಷಣ ಪಡೆಯುತ್ತಿರುವ ಈ ಸಂದರ್ಭದಲ್ಲಿ ಶಾಲಾ ಅಗತ್ಯ ಸೌಲಭ್ಯಗಳಲ್ಲಿ ಒಂದಾಗಿರುವ ಶಾಲಾ ವಾಹನ ಸೌಲಭ್ಯವನ್ನು ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರವರು ಶಾಲಾ ವಾಹನವನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರು, ಶಾಲೆ ಹಾಗೂ ಪದವಿಪೂರ್ವ ಕಾಲೇಜಿನ ಬೋಧಕ/ಬೋಧಕೇತರ ವೃಂದದವರು, ಶಾಲಾ ಹಳೆ ವಿದ್ಯಾರ್ಥಿ ಶ್ರೀಧರ್ ರಾವ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.











