ಬೈಂದೂರು :”ಸಂಸದ್ ಖೇಲ್ ಮಹೋತ್ಸವ್-2025 ” – ಸ್ಥಳೀಯ ಕ್ರೀಡಾ ಪ್ರತಿಭೆಗಳ ಒಂದು ಅನಾವರಣ ವೇದಿಕೆ

0
350

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಕೇಂದ್ರ ಸರ್ಕಾರ ದೇಶದ ಕ್ರೀಡಾ ಕ್ಷೇತ್ರವನ್ನು ಮತ್ತೊಂದು ಮಹತ್ವದ ಘಟ್ಟಕ್ಕೆ ಕೊಂಡೊಯ್ಯಲು ದೇಶದ ಇತಿಹಾಸದಲ್ಲಿ ಮೊದಲ ಪ್ರಯತ್ನವಾಗಿ ದೇಶದಾದ್ಯಂತ ಜಾರಿಗೆ ತಂದಿರುವ “ಸಂಸದ್ ಖೇಲ್ ಮಹೋತ್ಸವ್-2025” ನೋಂದಣಿ ಪ್ರಕ್ರಿಯೆಗೆ ಇಂದು ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 2030 ರಲ್ಲಿ “ಕಾಮನ್ ವೇಲ್ತ್ ಗೇಮ್ಸ್” ಹಾಗೂ 2036 ರಲ್ಲಿ “ಒಲಿಂಪಿಕ್ ಗೇಮ್ಸ್” ಆಯೋಜನೆ ಮಾಡಲು ಈಗಾಗಲೇ ಪೂರ್ವ ತಯಾರಿ ಮಾಡಿಕೊಂಡಿದೆ.

Click Here

ಈಗಾಗಲೇ “ಖೇಲೋ ಇಂಡಿಯಾ” ಹಾಗೂ “ಫಿಟ್ ಇಂಡಿಯಾ” ಯೋಜನೆ ಜಾರಿಯ ಮೂಲಕ ದೇಶದಲ್ಲಿರುವ ಲಕ್ಷಾಂತರ ಕ್ರೀಡಾ ಪ್ರತಿಭೆಗಳನ್ನು ಮುನ್ನೆಲೆಗೆ ತಂದು ವಿಶ್ವದ ಬಲಿಷ್ಠ ರಾಷ್ಟ್ರಗಳ ಕ್ರೀಡಾ ಪಟುಗಳೊಂದಿಗೆ ಪೈಪೋಟಿ ನಡೆಸಿ ವಿಶ್ವ ಮಟ್ಟದಲ್ಲಿ ತಮ್ಮ ಪ್ರತಿಭೆ ಅನಾವರಣಗೊಳಿಸಿಕೊಂಡಿದ್ದಾರೆ.

ಇದರ ಮುಂದುವರೆದ ಭಾಗವಾಗಿ ದೇಶದ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿರುವ ಇನ್ನೂ ಅನೇಕ ಕ್ರೀಡಾ ಪಟುಗಳನ್ನು ಮತ್ತು ಕ್ರೀಡಾ ಆಸಕ್ತರನ್ನು ಮುನ್ನೆಲೆಗೆ ತರಲು ಈ ಯೋಜನೆ ಮಹತ್ವದ ಮೈಲಿಗಲ್ಲಾಗುವ ಉದ್ದೇಶದಿಂದ ಜಾರಿಗೆ ತರಲಾಗಿದೆ.

ಇದು ಕೇವಲ ದೇಶದ ಕ್ರೀಡಾ ಹಬ್ಬವಾಗದೆ ದೇಶದ ಹಿರಿಮೆ, ಗರಿಮೆ ವಿಶ್ವ ಭೂಪಟದಲ್ಲಿ ರಾರಾಜಿಸಲು ವೇದಿಕೆಯಾಗಿದೆ. ಈ ಮೂಲಕ ದೇಶದ ಕ್ರೀಡಾ ಕ್ಷೇತ್ರವನ್ನು ಜಾಗತಿಕ ಮಟ್ಟದಲ್ಲಿ ಛಾಪು ಮೂಡಿಸಲು ಮುನ್ನುಡಿ ಬರೆಯಲು ವಿಶೇಷ ವೇದಿಕೆಯಾಗಿದೆ.

Click Here

LEAVE A REPLY

Please enter your comment!
Please enter your name here