ಕುಂದಾಪುರ :ತೆರಿಗೆ ಇಳಿಕೆ – ಕುಂದಾಪುರ ಬಿಜೆಪಿ ವತಿಯಿಂದ ಸಂಭ್ರಮಾಚರಣೆ

0
251

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಇತ್ತೀಚೆಗೆ ದೆಹಲಿಯಲ್ಲಿ ಜಿ.ಎಸ್.ಟಿ(GST)ಕೌನ್ಸಿಲ್ ಸಭೆ ದೆಹಲಿಯಲ್ಲಿ ನಡೆದಿದ್ದು, ಪ್ರಧಾನ ಮಂತ್ರಿಗಳು ಐತಿಹಾಸಿಕ ತೆರಿಗೆ ಇಳಿಕೆ ನಿರ್ಧಾರವನ್ನು ಕೈಗೊಂಡಿದ್ದು ಇದರಿಂದ ಬಡವರಿಗೆ ಮಧ್ಯಮ ವರ್ಗದವರಿಗೆ ದೊಡ್ಡ ಪ್ರಮಾಣದಲ್ಲಿ ಸಹಾಯವಾಗಲಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದರು.

ಕುಂದಾಪುರ ಶಾಸ್ತ್ರಿ ಸರ್ಕಲ್ ಬಳಿ ಪಟಾಕಿಯನ್ನು ಸಿಡಿಸಿ ನಂದಿನಿ ಕೆಎಂಎಫ್ ನಲ್ಲಿ ಉತ್ಪನ್ನದ ಮಳಿಗೆಯಲ್ಲಿ ತಿಂಡಿ ಖರೀದಿಸಿ ಸಾರ್ವಜನಿಕರಿಗೆ ವಿತರಿಸಲಾಯಿತು.

Click Here

ಈ ಸಂದರ್ಭದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ ಬಡ ಹಾಗೂ ಮಧ್ಯಮ ವರ್ಗದವರಿಗೆ ನವರಾತ್ರಿಯ ಶುಭದಿನದಂದು ಒಳ್ಳೆಯ ಗಿಫ್ಟನ್ನು ದೇಶದ ಜನತೆಗೆ ನೀಡಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದರು.

ಈ ಸಂಭ್ರಮಾಚರಣೆ ನೇತೃತ್ವವನ್ನು ಕುಂದಾಪುರ ಮಂಡಲ ಬಿಜೆಪಿ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ ಎಸ್, ಪುರಸಭೆ ಅಧ್ಯಕ್ಷ ಮೋಹನ್ ದಾಸ್ ಶೆಣೈ, ಪುರಸಭೆ ಉಪಾಧ್ಯಕ್ಷೆ ವನಿತಾ ಬಿಲ್ಲವ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಭಾಕರ ವಿ. ಮತ್ತು ಕುಂದಾಪುರ ಮಂಡಲದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಪುರಸಭೆ ಮತ್ತು ವಿವಿಧ ಕ್ಷೇತ್ರದ ಜನ ಪ್ರತಿನಿಧಿಗಳು ಮೋದಿಜಿ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.

Click Here

LEAVE A REPLY

Please enter your comment!
Please enter your name here