ಕುಂದಾಪುರ ಮಿರರ್ ಸುದ್ದಿ…


ಕುಂದಾಪುರ :ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಹಬ್ಬವನ್ನು ಅದ್ಧೂರಿಯಾಗಿ, ಸಾಂಪ್ರದಾಯಿಕ ಶೈಲಿಯಲ್ಲಿ ಆಚರಿಸಲಾಯಿತು. ಈ ವಿಶೇಷ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಂಜಯಗಾಂಧಿ ಚಾರಿಟೇಬಲ್ ಟ್ರಸ್ಟ್ ನ ಎಲ್ಲಾ ನಿರ್ದೇಶಕರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದರು. ಇದು ನಾಡಿನ ಸಂಸ್ಕೃತಿಯ ಅನಾವರಣಕ್ಕೆ ವೇದಿಕೆಯಾಯಿತು.
ಸಾಂಪ್ರದಾಯಿಕ ಆಚರಣೆಗಳು:
ಹಬ್ಬದ ಆಚರಣೆಯು ಗದ್ದೆಪೂಜೆಯೊಂದಿಗೆ ಆರಂಭಗೊಂಡಿತು. ನಂತರ ಬಲೀಂದ್ರನನ್ನು ಕರೆಯುವುದು, ಬತ್ತ ಕುಟ್ಟುವುದು, ಮತ್ತು ರೈತರ ಸಲಕರಣೆಗಳನ್ನು ಪೂಜಿಸುವಂತಹ ಕೃಷಿ ಸಂಸ್ಕೃತಿಗೆ ಸಂಬಂಧಿಸಿದ ವಿಶಿಷ್ಟ ಆಚರಣೆಗಳನ್ನು ನಡೆಸಲಾಯಿತು. ಬತ್ತ ಜಪ್ಪುವ ಮತ್ತು ಧಾನ್ಯ ಪೂಜೆಯಂತಹ ಪದ್ಧತಿಗಳನ್ನು ಮಕ್ಕಳಿಗೆ ಪರಿಚಯಿಸಲಾಯಿತು.
ಪೋಷಕರ ಪ್ರಾತ್ಯಕ್ಷಿಕೆ:
ಪೋಷಕರಾದ ಕೇಶವ ಕಿಣಿ ಮತ್ತು ಸ್ಥಳೀಯ ಹಿರಿಯ ಕೃಷಿಕ ಜಗನ್ನಾಥ ಶೆಟ್ಟಿ ಯವರು ಹಬ್ಬದ ಪ್ರಾಮುಖ್ಯತೆ ಮತ್ತು ಆಚರಣೆಗಳ ಬಗ್ಗೆ ಮಕ್ಕಳಿಗೆ ಪ್ರಾಯೋಗಿಕ ಪ್ರಾತ್ಯಕ್ಷಿಕೆ ನೀಡಿದರು.
ಧಾರ್ಮಿಕ ಪೂಜೆಗಳು:
ತುಳಸಿ ಪೂಜೆ ಮತ್ತು ಗೋಪೂಜೆ, ಧಾನ್ಯ ಪೂಜೆಯಂತಹ ಧಾರ್ಮಿಕ ವಿಧಿಗಳನ್ನು ನೆರವೇರಿಸುವ ಮೂಲಕ ಪ್ರಾಣಿ ಮತ್ತು ಪ್ರಕೃತಿಯನ್ನು ಗೌರವಿಸುವ ಸಂದೇಶ ಸಾರಲಾಯಿತು.
ವಿದ್ಯಾರ್ಥಿಗಳ ಪ್ರದರ್ಶನ:
ಮಕ್ಕಳು ಹೂವಿನ ಕೋಲು ಪದ್ಯವನ್ನು ಅಭಿನಯಿಸಿ, ಅದರ ಅರ್ಥವನ್ನು ವಿವರಿಸಿದರು. ಇದು ಕಾರ್ಯಕ್ರಮಕ್ಕೆ ಹೊಸ ಮೆರುಗು ನೀಡಿತು.
ಈ ಸಂದರ್ಭದಲ್ಲಿ ಸ್ಥಳೀಯ ಉದ್ಯಮಿ ರೊಟೇರಿಯನ್ ಧನಂಜಯ ಪ್ರಭು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ದೀಪಾವಳಿ ಹಬ್ಬದ ಐತಿಹಾಸಿಕ ಹಿನ್ನೆಲೆ ಮತ್ತು ಕಥೆಗಳನ್ನು ಮಕ್ಕಳಿಗೆ ತಿಳಿಸಿದರು.
ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ ಅವರು ಹಬ್ಬದ ಆಚರಣೆಯ ಮಹತ್ವಿಕೆಯನ್ನು ತಿಳಿಸಿ ಎಲ್ಲರಿಗೂ ದೀಪಾವಳಿಯ ಶುಭಾಶಯಗಳನ್ನು ಕೋರಿದರು
ಕಾರ್ಯಕ್ರಮದಲ್ಲಿ ಟ್ರಸ್ಟ್ನ ಕಾರ್ಯದರ್ಶಿ ನವೀನ್ ಕುಮಾರ್ ಶೆಟ್ಟಿ, ಖಜಾಂಚಿ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ, ನಿರ್ದೇಶಕರಾದ ಅರುಣ್ ಕುಮಾರ್ ಶೆಟ್ಟಿ, ಉಮೇಶ್ ಕೊಠಾರಿ, ಮತ್ತು ಸುರೇಂದ್ರ ಶೆಟ್ಟಿ, ಶಾಲಾ ಆಡಳಿತಾಧಿಕಾರಿ ಶ್ರೀಮತಿ ಚೈತ್ರ ಯಡಿಯಾಳ ಅವರೂ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಸಂಯೋಜಕಿ ಸರೋಜ ರವರು ಕಾರ್ಯಕ್ರಮ ನಿರೂಪಿಸಿ, ಮುಖ್ಯ ಶಿಕ್ಷಕಿ ವಿಲಾಸಿನಿ ಶೆಟ್ಟಿ ಅವರು ಅತಿಥಿಗಳನ್ನು ಸ್ವಾಗತಿಸಿ, ಶಿಕ್ಷಕಿ ಶಶಿಕಲಾ ಅವರು ವಂದನಾರ್ಪಣೆ ಮಾಡಿದರು.
ಈ ಆಚರಣೆಯು ಕೇವಲ ಒಂದು ಹಬ್ಬದ ಸಂಭ್ರಮಕ್ಕೆ ಮಾತ್ರ ಸೀಮಿತವಾಗದೆ, ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಕೃತಿ, ಕೃಷಿ ಪದ್ಧತಿಗಳು ಮತ್ತು ಧಾರ್ಮಿಕ ಆಚರಣೆಗಳ ಬಗ್ಗೆ ಅರಿವು ಮೂಡಿಸುವ ಒಂದು ಶೈಕ್ಷಣಿಕ ಕಾರ್ಯಕ್ರಮವಾಗಿ ಮೂಡಿಬಂತು. ಈ ಸಡಗರದ ಹಬ್ಬದ ಆಚರಣೆಯಲ್ಲಿ ಹೆಚ್ಚಿನ ಪೋಷಕರು, ಎಲ್ಲಾ ವಿದ್ಯಾರ್ಥಿಗಳೂ,ಶಿಕ್ಷಕ, ಶಿಕ್ಷಕಿಯರು, ಸಿಬ್ಬಂದಿಯವರು ಉತ್ಸಾಹದಿಂದ ಪಾಲ್ಗೊಂಡರು.











