ಕುಂದಾಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮತ ಕಳ್ಳತನದ ವಿರುದ್ಧ ಸಹಿ ಅಭಿಯಾನಕ್ಕೆ ಚಾಲನೆ

0
729

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಮತ ಕಳ್ಳತನದ ವಿರುದ್ಧ ಸಹಿ ಅಭಿಯಾನಕ್ಕೆ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಚಾಲನೆ ನೀಡಲಾಯಿತು.

Click Here

ಸಂವಿಧಾನಾತ್ಮಕವಾಗಿ, ದೇಶದ ಪ್ರಜೆಗಳಿಗೆ ನೀಡಿದ ಮತದ ಹಕ್ಕು ಕದಿಯುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಈಗಾಗಲೇ ರಾಜ್ಯದಲ್ಲಿ 2023ರ ವಿಧಾನಸಭೆ ಚುನಾವಣೆಯ ಪೂರ್ವ ನಡೆದ ಅಕ್ರಮಗಳ ವಿರುದ್ಧ ತನಿಖೆಯನ್ನು ಎಸ್ ಐ ಟಿ ನಡೆಸುತ್ತಿದ್ದು , ಪೂರಕ ಸಾಕ್ಷಿಗಳು ದೊರತಿವೆ . ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಇಂತಹ ಜಾಲಗಳ ವಿರುದ್ಧ ಜನ ಜಾಗೃತಿ ನಡೆಸಲು ಸಹಿ ಅಭಿಯಾನವನ್ನು ಬ್ಲಾಕ್ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ವತಿಯಿಂದ ನಡೆಸಲಾಗುವುದು ಎಂದು
ನಾಯಕರದ ಮೊಳಹಳ್ಳಿ ದಿನೇಶ್ ಹೆಗ್ಡೆ ಯವರು ತಿಳಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ , ಅಕ್ರಮ-ಸಕ್ರಮ ಸಮಿತಿಯ ಸದಸ್ಯರಾದ ಕೇದೂರು ಸದಾನಂದ ಶೆಟ್ಟಿ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿನೋದ್ ಕ್ರಾಸ್ಟೋ , ಮಹಿಳಾ ಬ್ಲಾಕ್ ಅಧ್ಯಕ್ಷರಾದ ದೇವಕಿ ಸಣ್ಣಯ್ಯ , ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ಅಭಿಜಿತ್ ಪೂಜಾರಿ , ಐ ಟಿ ಸೆಲ್ ರಾಜ್ಯ ಉಪಾಧ್ಯಕ್ಷರಾದ ಚಂದ್ರಶೇಖರ ಶೆಟ್ಟಿ , ನಗರ ಕಾಂಗ್ರೆಸ್ ಅಧ್ಯಕ್ಷರಾದ ಗಣೇಶ್ ಶೇರಿಗಾರ್ , ಕುಂದಾಪುರ ವಿಧಾನಸಭಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಶಮಂತ್ , ಪುರಸಭಾ ಸದಸ್ಯರಾದ ಶ್ರೀಧರ ಶೇರಿಗಾರ್ , ಪ್ರಭಾವತಿ ಶೆಟ್ಟಿ , ಅಶೋಕ್ ಸುವರ್ಣ , ಶಶಿಧರ ಕೋಟೆ , ಸದಾನಂದ ಖಾರ್ವಿ , ಪಂಚಾಯತ್ ಸದಸ್ಯರಾದ ರೋಷನ್ ಬರೆಟ್ಟೊ, ಯುವ ಮುಖಂಡರಾದ ಕೊಡಿ ಸುನಿಲ್ ಪೂಜಾರಿ , ನಟರಾಜ್ ಹೊಳ್ಳ, ಅಲ್ಪಸಂಖ್ಯಾತ ಘಟಕದ ಜಿಲ್ಲಾ ಕಾರ್ಯದರ್ಶಿ ಜೋಸೆಫ್ ರೆಬೆಲ್ಲೊ , ಅರುಣ್ ಪಟೇಲ್ , ವಿವೇಕಾನಂದ ಇನ್ನಿತರರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here