ಕುಂದಾಪುರ ಮಿರರ್ ಸುದ್ದಿ…
ಹೆಮ್ಮಾಡಿ: ಈಗಾಗಲೇ ನಡೆಯುತ್ತಿರುವ ರಾಜ್ಯ ಮಟ್ಟದ ವಿವಿಧ ಕ್ರೀಡಾ ಕೂಟಗಳಲ್ಲಿ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಯೋಗೀಶ್ (ನೆಟ್ ಬಾಲ್ ), ಆದಿತ್ಯ (ವಾಲಿಬಾಲ್ ), ಸಾಹಿಮ್ (ಕಬಡ್ಡಿ), ಪ್ರಣೀತ (ಕುಸ್ತಿ)ಭಾಗವಹಿಸಿ ಉತ್ತಮ ಸಾಧನೆಗೈದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.











