ಕುಂದಾಪುರ :ಭಂಡಾರ್ಕಾರ್ಸ್ ಕಾಲೇಜಿನಲ್ಲಿ “ಟೀಂ ಯುವಶಕ್ತಿ ಟ್ರಸ್ಟ್” ಉದ್ಘಾಟನೆ

0
272

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮುಖಾಂತರ ವಿದ್ಯಾರ್ಥಿ ಜೀವನವನ್ನು ಸಾರ್ಥಕಗೊಳಿಸಿ ಎಂದು ಉದ್ಯಮಿ ದಿನೇಶ್ ಹೆಗ್ಡೆ ಮೊಳಹಳ್ಳಿ ಕರೆ ನೀಡಿದರು.

Click Here

ಅವರು ಮಾರ್ಚ್ 7ರಂದು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ “ಟೀಂ ಯುವಶಕ್ತಿ ಟ್ರಸ್ಟ್” ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಇಂದಿನ ಆಧುನಿಕ ತಂತ್ರಜ್ಞಾನ ಮತ್ತು ಮೊಬೈಲ್ ಯುಗದಲ್ಲಿ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುತ್ತಿರುವುದೇ ಹೆಚ್ಚು. ಆದರೆ ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಆರಂಭವಾದ “ಟೀಂ ಯುವಶಕ್ತಿ ಟ್ರಸ್ಟ್ ” ತುಂಬಾ ವಿಶೇಷವಾದ ಸಮಾಜಮುಖಿ ಚಿಂತನೆಯನ್ನು ಕಂಡುಕೊಂಡು ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಅವರು ಈ ಕಾರ್ಯ ನಿಜಕ್ಕೂ ಅಭಿನಂದನೀಯ. ಅವರುಗಳು ಈ ಕಾರ್ಯ ವಿದ್ಯಾರ್ಥಿಗಳಿಗೆ ಪ್ರೇರಣಾ ಶಕ್ತಿಯಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ ಡಾ.ಶುಭಕರಾಚಾರಿ ಮಾತನಾಡಿ ವಿದ್ಯಾರ್ಥಿಗಳ ಈ ಕೆಲಸ ಕಾಲೇಜಿನ ಹೆಮ್ಮೆ. ಇನ್ನಷ್ಟು ವಿದ್ಯಾರ್ಥಿಗಳು ಇಂತಹ ಒಳ್ಳೆಯ ಕೆಲಸದಲ್ಲಿ ತೊಡಗಿಕೊಳ್ಳಿ. ವಿದ್ಯಾರ್ಥಿಗಳು ಈ ಮೂಲಕ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಮಾಜಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಆರ್.ಎನ್.ಎಸ್, ಬೆಂಗಳೂರು ಇದರ ಪ್ರಾದೇಶಿಕ ವ್ಯವಸ್ಥಾಪಕರಾದ ಪ್ರಭಾಕರ, ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಮ್.ಗೊಂಡ, ಭಂಡಾರ್ಕಾರ್ಸ್ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ ಅರುಣ್ ಕುಮಾರ್ ಎ.ಎಸ್. ಭಂಡಾರ್ಕಾರ್ಸ್ ಪದವಿ ಕಾಲೇಜಿನ ಕಛೇರಿ ವ್ಯವಸ್ಥಾಪಕರಾದ ಗೋಪಾಲ್ ನಾಯ್ಕ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ ಆನಗಳ್ಳಿ ಇದರ ಶರತ್ ಕಾಂಚನ್, ಹೆಲ್ಪಿಂಗ್ ಹ್ಯಾಂಡ್ಸ್ ಇದರ ಸದಸ್ಯರಾದ ರತನ್ ಅವರನ್ನು ಸನ್ಮಾನಿಸವಾಯಿತು. ಅವರು ತಂಡದ ಸದಸ್ಯರು ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನಾಡ ಗ್ರಾಮದ ಕೋಣ್ಕಿ ಇಲ್ಲಿನ ವಿಶೇಷ ಚೇತನ ಶ್ರೀರಕ್ಷಾ ಶೆಟ್ಟಿ ಅವರಿಗೆ ಮ್ಯೂಸಿಕ್ ಸ್ಟ್ಯಾಂಡ್ ನೀಡಿ ಗೌರವಿಸಲಾಯಿತು. ಚರ್ಚ್ ರಸ್ತೆಯ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಪುಸ್ತಕ ಮತ್ತು ಬೋರ್ಡ್ ಹೈಸ್ಕೂಲ್, ಕುಂದಾಪುರ ಇಲ್ಲಿನ ವಿದ್ಯಾರ್ಥಿಗಳಿಗೆ ಬ್ಯಾಗಗಳು , ಮತ್ತು ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ರಾಘವೇಂದ್ರ, ಚೈತ್ರ ಸಂಜೀವ, ವಸಂತಿ ಆಚಾರ್ಯ, ಮತ್ತು ನಾಗೇಂದ್ರ ಅವರಿಗೆ ಧನಸಹಾಯ ಮಾಡಲಾಯಿತು.
ರೇಡಿಯೋ ಕುಂದಾಪುರ 89.6 ಎಫ್.ಎಮ್ ಇದರ ಕಾರ್ಯಕ್ರಮ ನಿರ್ವಹಕಿ ಜ್ಯೋತಿ ಸಾಲಿಗ್ರಾಮ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಧನುಷ್ ಸ್ವಾಗತಿಸಿದರು. ಟೀಂ ಯುವಶಕ್ತಿ ಟ್ರಸ್ಟ್ ಇದರ ಸದಸ್ಯ ಮತ್ತು ಕಾಲೇಜಿನ ವಿದ್ಯಾರ್ಥಿ ಶಶಾಂಕ್ ವಂದಿಸಿದರು.

Click Here

LEAVE A REPLY

Please enter your comment!
Please enter your name here