ಕೋಟ-ಗಾಂಧಿಯ ತತ್ವಗಳನ್ನು ಯುವ ಜನತೆಗೆ ಅರ್ಥೈಸಬೇಕಿದೆ-ನರೇಂದ್ರ ಕುಮಾರ್ ಕೋಟ

0
291

Click Here

Click Here

ಕುಂದಾಪುರ ಮಿರರ್ ಸುದ್ದಿ…
ಕೋಟ:
ಗಾಂಧಿಯ ವಿಚಾರಧಾರೆಗಳನ್ನು ಸರಿಯಾಗಿ ತಿಳಿದುಕೊಳ್ಳದೆ ಹಲವು ಬಗೆಯ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಎಳೆಯ ಮಕ್ಕಳು ಕೂಡ ತಪ್ಪು ತಪ್ಪಾಗಿ ಗಾಂಧಿಯನ್ನು ಅರ್ಥೈಸಿಕೊಳ್ಳುತ್ತಿದ್ದಾರೆ ಇದು ಅಪಾಯಕಾರಿ ಇದಕ್ಕೆ ಸಾಮಾಜಿಕ ಜಾಲತಾಣಗಳ ಪ್ರಭಾವ ಬಹಳಷ್ಟಿದೆ. ಹಿರಿಯರು ಗಾಂಧಿಯ ವಿಚಾರಧಾರೆಗಳನ್ನು ಅರ್ಥಮಾಡಿಕೊಂಡವರು ಗಾಂಧಿಯ ವಿಚಾರಧಾರೆಗಳನ್ನು ಎಳೆಯರಿಗೆ ತಲುಪಿಸಬೇಕಾಗಿದೆ ಎಂದರು. ಸ್ವಾತಂತ್ರ್ಯ ಪೂರ್ವದ ಭಾರತದ ಸಾಮಾಜಿಕ ಸ್ತರವಿನ್ಯಾಸದ ಆಧಾರದಮೇಲೆ ಗಾಂಧಿಯನ್ನು ಯುವ ಜನತೆಗೆ ಮನಗಾಣಬೇಕಾಗಿದೆ ಎಂದು ಸಾಹಿತಿ ನರೇಂದ್ರ ಕುಮಾರ್ ಕೋಟ ವ್ಯಕ್ತಪಡಿಸಿದ್ದಾರೆ.

ಅವರು ಗಾಂಧಿ ಸಂಸ್ಮರಣೆಯನ್ನು ಗಾಂಧಿ ವಿಚಾರ ವೇದಿಕೆ ಬ್ರಹ್ಮಾವರ ಘಟಕ ಕ.ಸಾ.ಪ ಕಚೇರಿ ಕೋಟದಲ್ಲಿ ಏರ್ಪಡಿಸಿದ ಗಾಂಧಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಗಾಂಧಿಗೆ ನುಡಿನಮನ ಸಲ್ಲಿಸಿದರು. ಅಧ್ಯಕ್ಷತೆ ವಹಿಸಿದ್ದ ಗಾಂಧಿ ವಿಚಾರವೇದಿಕೆ ಬ್ರಹ್ಮಾವರ ತಾಲೂಕು ಘಟಕದ ಅಧ್ಯಕ್ಷರಾದ ಪ್ರೋಫೇಸರ್ ಸಿ ಉಪೇಂದ್ರ ಸೋಮಯಾಜಿಯವರು ಎಳೆಯರು ಗಾಂಧಿಯನ್ನು ಅವರ ಪರಿಸರದ ಪ್ರಭಾವ ಮತ್ತು ಸಮಕಾಲೀನ ತಿಳುವಳಿಕೆಯಿಂದ ಅರ್ಥೈಸಿಕೊಳ್ಳುತ್ತಾರೆ ಇದು ಅಪಾಯಕಾರಿ ಕೂಡ. ಪರಿಪೂರ್ಣತೆಗೆ ಬಹಳಷ್ಟು ಹತ್ತಿರವಾಗಿದ್ದ ಗಾಂಧಿ ವಿಚಾರಧಾರೆಗಳು ಸರ್ವಕಾಲಕ್ಕೂ ಸಲ್ಲುವಂತಹದು.ಐನ್ಸ್ಟೈನ್ ಹೇಳಿದಂತೆ ಇಂತಹ ಒಬ್ಬ ವ್ಯಕ್ತಿ ಭೂಮಿಯ ಮೇಲೆ ಜೀವಿಸಿದ್ದ ಅನ್ನೋದು ನಂಬುವುದು ಕಷ್ಟ.ಅಂತಹ ಗಾಂಧಿಯನ್ನು ಯುವ ಜನತೆ ಹಾಗು ಎಳೆಯ ಮಕ್ಕಳಿಗೆ ಹೆಚ್ಚು ಹೆಚ್ಚು ಪರಿಚಯಿಸುವ ಕೆಲಸವಾಗಬೇಕು ಎಂದರು.

Click Here

ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ಜಿಲ್ಲೆಯ ಅಧ್ಯಕ್ಷ ಮತ್ತು ಗಾಂಧಿ ವಿಚಾರ ವೇದಿಕೆ ಮಾತೃ ಸಮಿತಿಯ ಉಪಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹಿಂದೆ ಆಕಾಶವಾಣಿಯಲ್ಲಿ ಪ್ರಸಾರವಾಗಿದ್ದ ತಮ್ಮ ಗಾಂಧಿ ಸ್ಮೃತಿಯನ್ನು ವಾಚಿಸಿದರು. ಉಪಾಧ್ಯಕ್ಷ ಎಚ್ ಸೋಮಶೇಖರ್ ಶೆಟ್ಟಿ, ಶ್ರೀಪತಿ ಹೇರ್ಳೆ,ನಾಗೇಶ ಮಯ್ಯ,ರಾಮಚಂದ್ರ ಐತಾಳ್ ಇವರು ಗಾಂಧಿ ಸಂಸ್ಮರಣೆಯನ್ನು ಮಾಡಿದರು. ಪದಾಧಿಕಾರಿ ಮಹಾಲಕ್ಷ್ಮಿ ಸೋಮಯಾಜಿ ಗಾಂಧಿ ಪ್ರಾರ್ಥನೆ ಯನ್ನು ಹಾಡಿದರು. ಪದಾಧಿಕಾರಿಯಾದ ಸುಮನಾ ಹೇರ್ಳೆ ಸ್ವಾಗತಿಸಿದರು.ಭಾಸ್ಕರ ಪೂಜಾರಿಯವರು ಧನ್ಯವಾದ ಸಮರ್ಪಿಸಿ ಗಾಂಧಿವಿಚಾರ ವೇದಿಕೆ ಬ್ರಹ್ಮಾವರ ಘಟಕದ ಕಾರ್ಯದರ್ಶಿ ಸತೀಶ್ ವಡ್ಡರ್ಸೆ ಕಾರ್ಯಕ್ರಮ ನಿರೂಪಣೆ ಮಾಡಿದರು.

Click Here

LEAVE A REPLY

Please enter your comment!
Please enter your name here