ಕುಂದಾಪುರ ಮಿರರ್ ಸುದ್ದಿ…
ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಪಂಚವರ್ಣ ಮಹಿಳಾ ಘಟಕ ಇದರ ನೇತ್ರತ್ವದಲ್ಲಿ ರೈತಧ್ವನಿ ಸಂಘ ಕೋಟ, ಗಿಳಿಯಾರು ಯುವಕ ಮಂಡಲ ಗಿಳಿಯಾರು,ಮಣೂರು ಫ್ರೆಂಡ್ಸ್ ಮಣೂರು, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ,ಗೀತಾನಂದ ಫೌಂಡೇಶನ್ ಮಣೂರು,ಗೆಳೆಯರ ಬಳಗ ಕಾರ್ಕಡ ಇವರುಗಳ ಸಹಯೋಗದಲ್ಲಿ 16ನೇ ಆವೃತಿಯ ತಿಂಗಳ ಸರಣಿ ಕಾರ್ಯಕ್ರಮ ಸಾಧಕ ಕೃಷಿಕನ ಗೌರವಿಸುವ ರೈತರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮ ಮೇ.29 ಭಾನುವಾರ ಬೆಳಿಗ್ಗೆ 10.ಗ ನಡೆಯಲಿದೆ.
ಈ ಬಾರಿ ಹೈನುಗಾರಿಕೆ ಹಾಗೂ ಕೃಷಿ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ ಸಾಧಕ ಕೋಟದ ಕಾಸನಗುಂದು ಶ್ರೀಕಾಂತ್ ಮಯ್ಯ ಇವರನ್ನು ಗೌರವಿಸಲಾಗುವುದು ಅಲ್ಲದೆ ರವೀಂದ್ರ ಮೊಗವೀರ ಜಿಲ್ಲಾ ವಿಮಾ ಸಂಯೋಜರು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಇವರಿಂದ ಕೃಷಿ ಮಾಹಿತಿ ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











