ಕೇಂದ್ರ ಸರಕಾರದಿಂದ ಸಾಂವಿಧಾನಿಕ ಸಂಸ್ಥೆಗಳ ದುರಪಯೋಗ – ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ

0
429

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ದೇಶದ ಸಾಂವಿಧಾನಿಕ ಸಂಸ್ಥೆಗಳನ್ನು ವಿರೋಧ ಪಕ್ಷಗಳನ್ನು ಮಣಿಸಲು ಬಳಸಿಕೊಂಡ ಸ್ವಾತಂತ್ರ್ಯ ನಂತರದ ಪ್ರಥಮ ಪ್ರಧಾನಿ ನರೇಂದ್ರ ಮೋದಿ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ ತಿಳಿಸಿದ್ದಾರೆ.

ವಿರೋಧ ಪಕ್ಷಗಳ ಮಣಿಸಲು ಸ್ವಾಯತ್ತ ಸಂಸ್ಥೆ ಗಳಾದ ಐಟಿ ,ಇಡಿ ಮತ್ತು ಸಿಬಿಐ ಯಂತಹ ಸಂಸ್ಥೆಗಳನ್ನು ಕಳೆದ 8 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಗ್ರಹ ಸಚಿವ ಅಮಿತ್ ಷಾ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ದುರದ್ರಷ್ಟಕರ ವಿಚಾರ .

Click Here

ಪ್ರಸ್ತುತ ದಿನಗಳಲ್ಲಿ ಕಾಂಗ್ರೆಸ್ ನಾಯಕರುಗಳನ್ನು ಮತ್ತು ದೇಶದ ವಿರೋಧ ಪಕ್ಷದ ಮುಖಂಡರನ್ನುಮಣಿಸಲು ಸ್ವಾಯತ್ತ ಸಂಸ್ಥೆ ಗಳ ದುರ್ಬಳಕೆ ಮಾಡಿ ದಾಳಿ ಮಾಡುವುದು ನಿರಂತರವಾಗಿ ನಡೆಯುತ್ತಾ ಬಂದಿದ್ದು,
ಪ್ರಜೆಗಳ ಸ್ವಾತಂತ್ರ್ಯ ಕಿತ್ತುಕೊಂಡು ಅಧಿಕಾರ ದುರ್ಬಳಕೆ ಮಾಡುತ್ತಿರುವುದು ಖಂಡನೀಯ.

ಇಂತಹ ಸರ್ವಾಧಿಕಾರಿ ಆಡಳಿತಕ್ಕೆ ಮುಂದಿನ ದಿನಗಳಲ್ಲಿ ಜನ ತಕ್ಕ ಉತ್ತರ ನೀಡಲಿದ್ದಾರೆ.

Click Here

LEAVE A REPLY

Please enter your comment!
Please enter your name here