ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಮಣಿಪಾಲದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಉಡುಪಿ ಜಿಲ್ಲೆಯಿಂದ ಆಯ್ಕೆಯಾದ 38 ಶಾಲೆಗಳಿಗೆ ಸ್ವಚ್ಛ ವಿದ್ಯಾಲಯ ಪುರಸ್ಕಾರ ಪ್ರಶಸ್ತಿ ಪತ್ರ ವಿತರಿಸುವ ಸಮಾರಂಭವನ್ನು ನಡೆಸಲಾಗಿದ್ದು. ಕುಂದಾಪುರದ ಓಕ್ ವುಡ್ ಇಂಡಿಯನ್ ಸ್ಕೂಲ್ ಆಯ್ಕೆಯಾಗಿದ್ದು. ಪೋಟ್೯ಗೇಟ್ ಎಜ್ಯುಕೇಶನ್ ನ ಕಾಯ೯ದಶಿ೯ ನೀತಾ ಶೆಟ್ಟಿ ಯವರು ಪ್ರಶಸ್ತಿಯನ್ನು ಸ್ವೀಕರಿಸಿರು.
ಜಿಲ್ಲಾ ಉಸ್ತುವಾರಿ ಸಚಿವರಾದ ಅಂಗಾರ ಅವರು ಮತ್ತು ಉಡುಪಿ ಶಾಸಕ ರಘುಪತಿಭಟ್ ಪ್ರಶಸ್ತಿ ಪತ್ರ ವಿತರಿಸಿದರು.
ಅಪರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೀನಾ ಬಿ.ಎನ್. ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಗೋವಿಂದ ಮಡಿವಾಳ ಉಪಸ್ಥಿತರಿದ್ದರು.











