ಸುಜ್ಞಾನ ಪಿಯು ಕಾಲೇಜಿನಲ್ಲಿ ಕೃಷಿ, ಪಶುವೈದ್ಯಕೀಯ ವಿಜ್ಞಾನ ಕಾರ್ಯಾಗಾರ

0
8

Click Here

Click Here

“ಕೃಷಿ, ಪಶುವೈದ್ಯಕೀಯ ಕ್ಷೇತ್ರಗಳಲ್ಲಿ ಅಪಾರ ಉದ್ಯೋಗಾವಕಾಶ’

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಇಲ್ಲಿನ ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಬಿ.ಎಸ್ಸಿ ‘ಕೃಷಿ ಮತ್ತು ಪಶುವೈದ್ಯಕೀಯ ವಿಜ್ಞಾನ’ ಕೋರ್ಸ್ ಗಳ ಭವಿಷ್ಯ ಹಾಗೂ ಉದ್ಯೋಗಾವಕಾಶಗಳ ಕುರಿತು ವಿಶೇಷ ಮಾರ್ಗದರ್ಶನ ಕಾರ್ಯಾಗಾರ ಇತ್ತೀಚೆಗೆ ಆಯೋಜಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದ ಹೆಸರಾಂತ ಕೃಷಿ ಶಿಕ್ಷಣ ತಜ್ಞ ರಾಜು ಬೆಳ್ಳುಂಡಗಿ ಅವರು ವಿದ್ಯಾರ್ಥಿಗಳಿಗೆ ಕೃಷಿ ಮತ್ತು ಪ್ರಾಣಿ ವಿಜ್ಞಾನ (Farm Science) ಕ್ಷೇತ್ರದ ಮಹತ್ವವನ್ನು ಮನಮುಟ್ಟುವಂತೆ ವಿವರಿಸಿದರು.

Click Here

“ಹಿಂದಿನ ದಿನಗಳಲ್ಲಿ ಬಿ.ಎಸ್ಸಿ ಕೃಷಿ ಅಥವಾ ಪಶುವೈದ್ಯಕೀಯ ಶಿಕ್ಷಣದ ಕಡೆಗೆ ಹೆಚ್ಚಿನ ವಿದ್ಯಾರ್ಥಿಗಳು ಗಮನ ಹರಿಸುತ್ತಿರಲಿಲ್ಲ ಹಾಗೂ ಸ್ಪರ್ಧೆಯೂ ಕಡಿಮೆಯಿತ್ತು. ಆದರೆ, ಇಂದಿನ ಬದಲಾದ ಯುಗದಲ್ಲಿ ಈ ‘ಫಾರ್ಮ್ ಸೈನ್ಸ್’ ಕ್ಷೇತ್ರವು ಅತ್ಯಂತ ಶರವೇಗದಲ್ಲಿ ಬೆಳೆಯುತ್ತಿದೆ. ವೈಜ್ಞಾನಿಕ ಕೃಷಿ, ಆಹಾರ ಸಂಸ್ಕರಣೆ, ಪಶುಸಂಗೋಪನೆ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟದಲ್ಲಿ ಹೊಸ ತಂತ್ರಜ್ಞಾನಗಳು ಬಂದಿರುವುದರಿಂದ ಕೋರ್ಸ್ ಮುಗಿಸಿದ ತಕ್ಷಣ ಹೇರಳ ಉದ್ಯೋಗಾವಕಾಶಗಳು ಲಭ್ಯವಿವೆ. ನಿರಂತರ ಆಸಕ್ತಿ ಮತ್ತು ಶ್ರದ್ಧೆಯಿಂದ ಅಧ್ಯಯನ ನಡೆಸಿದರೆ ಈ ರಂಗದಲ್ಲಿ ಅತ್ಯುನ್ನತ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ,” ಎಂದು ವಿವರಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ರಂಜನ್ ಶೆಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ವಿನಯ್ ಕುಮಾರ್ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರೆ, ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕರಾದ ದುಷ್ಯಂತ ಭಾರದ್ವಾಜ್ ಧನ್ಯವಾದ ಸಮರ್ಪಿಸಿದರು.

ಈ ಕಾರ್ಯಾಗಾರದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಭಾಗವಹಿಸಿ, ತಮ್ಮ ಮುಂದಿನ ಶೈಕ್ಷಣಿಕ ಭವಿಷ್ಯದ ಕೋರ್ಸುಗಳ ಕುರಿತು ಉಪಯುಕ್ತ ಮಾಹಿತಿ ಪಡೆದುಕೊಂಡರು.

Click Here

LEAVE A REPLY

Please enter your comment!
Please enter your name here