ಕೋಟೇಶ್ವರ :ಗುರುಕುಲ ಪದವಿ ಪೂರ್ವ ಕಾಲೇಜಿನಲ್ಲಿ ಹದಿಹರೆಯ ಮತ್ತು ಸಾಮಾಜಿಕ ಜಾಲತಾಣ – ವಿಶೇಷ ಕಾರ್ಯಾಗಾರ

0
48

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ವಕ್ವಾಡಿಯ ಗುರುಕುಲ ಪದವಿ ಪೂರ್ವ ಕಾಲೇಜಿನಲ್ಲಿ ಹದಿಹರೆಯಕ್ಕೆ ವೈಚಾರಿಕ ಮಾಹಿತಿ ಮತ್ತು ಸಾಮಾಜಿಕ ಜಾಲತಾಣಗಳು ಎಂಬ ವಿಷಯದ ಬಗ್ಗೆ ಡಾಕ್ಟರ್ ಸುನಿಲ್. ಜಿ. ಎ ವಿ ಬಾಳಿಗಾ ಮೆಮೋರಿಯಲ್ ಹಾಸ್ಪಿಟಲ್ ಉಡುಪಿ, ಇವರು ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಕ್ರಮವನ್ನು ಉದ್ಧಾಟಿಸಿ ಮಾತನಾಡುತ್ತಾ – ಹದಿಹರೆಯವು ವಿದ್ಯಾರ್ಥಿಗಳ ಜೀವನದಲ್ಲಿ ಅತೀ ಸೂಕ್ಷ್ಮವಾದ ಘಟ್ಟವಾಗಿದೆ . ಭೌತಿಕವಾಗಿ, ಮಾನಸಿಕವಾಗಿ ಬೆಳೆಯುವ ಈ ಹಂತದಲ್ಲಿ ಆರೋಗ್ಯಕರವಾದ ವಿಚಾರಗಳನ್ನು ಆಯ್ಕೆ ಮಾಡಿಕೊಂಡು ಜಾಗ್ರತೆಯಿಂದ ಹೆಜ್ಜೆ ಇಡಬೇಕಾಗಿದೆ. ದುರ್ವೆಸನಗಳಿಗೆ ಬಲಿಯಾಗದೆ, ತಂತ್ರಜ್ಞಾನದ ದುರ್ಬಳಕೆ ಮಾಡಿಕೊಳ್ಳುದೆ ಶಿಕ್ಷಕರ ಮತ್ತು ಪೋಷಕರ ಮಾರ್ಗದರ್ಶನದೊಂದಿಗೆ ಉತ್ತಮ ಸಾಧನೆ ಮಾಡುತ್ತಾ ತಮ್ಮ ಬದುಕನ್ನು ಕಟ್ಟಿಕೊಳ್ಳುಬೇಕೆಂದರು. ವಿದ್ಯಾರ್ಥಿಗಳುಎದುರಿಸುವ ಭೌತಿಕ ಮತ್ತು ಮಾನಸಿಕ ಸಮಸ್ಯೆಗಳಿಗೆ ಕಾರಣವಾಗುವ ಅಂಶಗಳ ನಿವಾರಣೆಯ ಬಗ್ಗೆ ಸಂವಾದದ ಮೂಲಕ ಸೂಕ್ತವಾದ ಮಾಹಿತಿಗಳನ್ನು ನೀಡಿದರು.

Click Here

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ. ರೂಪಾ ಶೆಣೈ ಯವರು ವಿದ್ಯಾರ್ಥಿಗಳು ಹದಿಹರೆಯದಲ್ಲಿ ದುಶ್ಚಟಕ್ಕೆ ಬಲಿಯಾಗದೆ ಜೀವನವನ್ನು ಉತ್ತಮಗೊಳಿಸಿಕೊಂಡು ಗುರಿಯನ್ನು ತಲುಪಬೇಕು ಎಂದು ಮಾರ್ಗದರ್ಶನ ನೀಡಿದರು. ಕಾಲೇಜು ಪ್ರಾಂಶುಪಾಲರಾದ ಸಂದೀಪ್ ನಾಯಕ್ ರವರು ಕಾರ್ಯಾಗಾರಕ್ಕೆ ಶುಭ ಕೋರಿದರು. ಪ್ರೌಢಶಾಲಾ ವಿದ್ಯಾರ್ಥಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಧ್ಯಾಪಕರು ಉಪನ್ಯಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.ವಿದ್ಯಾರ್ಥಿ ಪ್ರಥಮ್ ಕಾರ್ಯಕ್ರಮ ನಿರೂಪಿಸಿ. ವಿದ್ಯಾರ್ಥಿ ಸರ್ವೇಶ್ ವಂದಿಸಿದರು

Click Here

LEAVE A REPLY

Please enter your comment!
Please enter your name here