ಯುವ ಜನೋತ್ಸವ-ರಸಪ್ರಶ್ನೆ ಸ್ಪರ್ಧೆ; ವಿದ್ಯಾರಣ್ಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

0
525

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ: ಕರ್ನಾಟಕ ರಾಜ್ಯ ಏಡ್ಸ್‌ ಪ್ರಿವೆನ್‌ಶನ್‌ ಸೊಸೈಟಿ ಬೆಂಗಳೂರು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್‌ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ‘ಯುವ ಜನೋತ್ಸವ-2026’ ರಸಪ್ರಶ್ನೆ ಸ್ಪರ್ಧೆಯಲ್ಲಿ ಕುಂದಾಪುರದ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಸಂಜಿತಾ ನಿಧಿ ಮತ್ತು ಪ್ರತೀಕ್‌ ಜಿ.ಎಂ. ಈ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರತಿಭೆ ಪ್ರದರ್ಶಿಸಿ ವಿಜೇತರಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸುಜ್ಞಾನ ಎಜುಕೇಶನಲ್‌ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ರಮೇಶ್‌ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್‌ ಚಂದ್ರ ಶೆಟ್ಟಿ, ಖಜಾಂಚಿ ಭರತ್‌ ಶೆಟ್ಟಿ ಹಾಗೂ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್‌ ಕುಮಾರ್‌ ಅವರು ಹರ್ಷ ವ್ಯಕ್ತಪಡಿಸಿ, ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Click Here

LEAVE A REPLY

Please enter your comment!
Please enter your name here