ಕಾರ್ಕಡ ಶಾಲೆಯಲ್ಲಿ ಪೂರಕ ಪೌಷ್ಟಿಕ ಆಹಾರವಿತರಿಸುವ ಪೋಷಣ್ ಶಕ್ತಿ ಅಭಿಯಾನ ಚಾಲನೆ

0
719

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಡ ಇಲ್ಲಿ 2022-23ನೇ ಸಾಲಿನ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ ಯೋಜನೆಯಡಿ ಮೊಟ್ಟೆ, ಬಾಳೆಹಣ್ಣು,ಶೇಂಗಾ ಚಿಕ್ಕಿ ವಿತರಿಸುವ ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮ ಬುಧವಾರ ನಡೆಯಿತು.

Click Here

ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಣೆಗಾಗಿ ರಾಜ್ಯದ ಸರ್ಕಾರಿ ಶಾಲೆಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆ, 2 ಬಾಳೆಹಣ್ಣು ,ಶೇಂಗಾ ಚಿಕ್ಕಿ ವಿತರಿಸುವ ಕಾರ್ಯಕ್ರಮವನ್ನು ಶಾಲಾ ಎಸ್. ಡಿ.ಎಂ.ಸಿ ಅಧ್ಯಕ್ಷ ಎಸ್.ಅರುಣ್ ಅಡಿಗ ಬಾಳೆಹಣ್ಣು ನೀಡುವುದರ ಮೂಲಕ ಚಾಲನೆ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಜಲಜಾಕ್ಷಿ , ಎಸ್. ಡಿ.ಎಂ.ಸಿ ಉಪಾಧ್ಯಕ್ಷೆ ಅನ್ನಪೂರ್ಣ ಅಂಗನವಾಡಿ ಟೀಚರ್ ರೇವತಿ, ಎಸ್. ಡಿ.ಎಂ.ಸಿ. ಸದಸ್ಯೆಯಾದ ರಾಗಿಣಿ, , ಲಕ್ಷ್ಮಿ ಮತ್ತಿತರರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here